
ಚೆನ್ನೈ, (ಅ.14): ಮುಂಬರುವ ಲೋಕಸಭಾ ಚುನಾವಣೆಗೆ ಸ್ಟಾರ್ ನಟ ಮಕ್ಕಳ್ ನಿಧಿ ಮೈಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕಾಂಗ್ರೆಸ್ ಜತೆ ಕೈ ಜೋಡಿಸಲು ಸಿದ್ಧರಾಗಿದ್ದಾರೆ.
ಮೈತ್ರಿ ಬಗ್ಗೆ ಸುದ್ದಿಗಾರರೊಮದಿಗೆ ಮಾತನಾಡಿದ ಕಮಲ್ ಹಾಸನ್, ತಮ್ಮ ಪಕ್ಷವಾದ ಮಕ್ಕಳ್ ನೀದಿ ಮೈಯಂ(ಎಂಎನ್ಎಂ), ಕಾಂಗ್ರೆಸ್ ಜತೆ ಮೈತ್ರಿಗೆ ಸಿದ್ಧವಿದೆ ಆದರೆ, ಡಿಎಂಕೆ ಜೊತೆಗಿನ ಮೈತ್ರಿಯನ್ನು ಕಾಂಗ್ರೆಸ್ ಬಿಡಬೇಕು ಎಂದು ಷರತ್ತು ವಿಧಿಸಿದ್ದಾರೆ.
ಕಮಲ್ ಹಾಸನ್ ಅವರು ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, 2019ರ ಲೋಕಸಭಾ ಚುನಾವಣೆಗೆ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದರು.
ಮಾತುಕತೆಯಂತೆ ಮೈತ್ರಿಗೆ ಕಮಲ್ ಓಕೆ ಅಂದಿದ್ದಾರೆ. ಆದ್ರೆ ಕಂಡಿಷನ್ ಹಾಕಿರುವುದು ಮಾತ್ರ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿದೆ. ಒಂದು ಕಡೆ ಕಮಲ ಹಸನ್ ಜೊತೆ ಕೈ ಜೋಡಿಸಿದ್ರೆ ಡಿಎಂಕೆ ಜೊತೆಗಿನ ಮೈತ್ರಿ ಮುರಿದುಕೊಳ್ಳಬೇಕಿದೆ.
ಇಲ್ಲವಾದಲ್ಲಿ ಕಮಲ್ ಹಾಸನ್ ಎಂಎನ್ಎಂ ಪಕ್ಷ ಕಾಂಗ್ರೆಸ್ ಜೊತೆ ಕೈ ಜೋಡಿಸುವುದು ಅನುಮಾನವಾಗಿದೆ. ಇದ್ರಿಂದ ಕಾಂಗ್ರೆಸ್ ಗೆ ಏನು ಮಾಡಬೇಕು ಎನ್ನುವುದು ತಿಳಿಯದೇ ಗೊಂದಲದಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.