
ಭೋಪಾಲ್[ಜು.10]: ಮಧ್ಯಪ್ರದೇಶದಲ್ಲಿನ ಉದ್ಯೋಗಗಳು ಬಿಹಾರ ಸೇರಿದಂತೆ ನೆರೆಯ ರಾಜ್ಯಗಳ ವಲಸಿಗರ ಪಾಲಾಗುತ್ತಿವೆ ಎಂಬ ದೂರುಗಳ ಬೆನ್ನಲ್ಲೇ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಖಾಸಗಿ ವಲಯದ ಉದ್ಯೋಗದಲ್ಲಿ ಸ್ಥಳೀಯ ಯುವಕರಿಗೆ ಶೇ.70ರಷ್ಟುಮೀಸಲಾತಿ ಕಲ್ಪಿಸುವ ಅವಕಾಶ ನೀಡುವ ಕಾನೂನು ರೂಪಿಸಲು ನಿರ್ಧರಿಸಿದೆ. ಈ ಕುರಿತು ಸ್ವತಃ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಅವರೇ ಮಾಹಿತಿ ನೀಡಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಕಲಾಪದ ಪ್ರಶ್ನೋತ್ತರ ವೇಳೆ ಮಾತನಾಡಿದ ಸಿಎಂ ಕಮಲ್ನಾಥ್ ಅವರು, ‘ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ, ಉತ್ತರ ಪ್ರದೇಶ ಹಾಗೂ ಬಿಹಾರದ ಹಲವು ನಾಯಕರಿಂದ ನಾನು ಟೀಕೆಗೆ ಒಳಗಾಗುತ್ತೇನೆ ಎಂಬ ಅರಿವಿದೆ. ಆದಾಗ್ಯೂ, ಈ ನಿರ್ಧಾರದಿಂದ ಹಿಂದೆ ಸರಿಯಲ್ಲ’ ಎಂದರು. ಅಲ್ಲದೆ, ಸರ್ಕಾರಿ ನೇಮಕಾತಿಯಲ್ಲೂ ಸ್ಥಳೀಯರಿಗೆ ಮೊದಲ ಆದ್ಯತೆ ಎಂದರು.
ಜೊತೆಗೆ, ಈಗಾಗಲೇ ಮಹಾರಾಷ್ಟ್ರ, ಗುಜರಾತ್ ಹಾಗೂ ಪಶ್ಚಿಮ ಬಂಗಾಳದಂಥ ರಾಜ್ಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಥಳೀಯ ಭಾಷೆಗಳನ್ನು ಅಳವಡಿಸಲಾಗಿದೆ. ಈ ಮೂಲಕ ಮಧ್ಯಪ್ರದೇಶದ ಯುವಕರು ಉದ್ಯೋಗ ಗಿಟ್ಟಿಸುವ ಅವಕಾಶವನ್ನು ಕಡಿತಗೊಳಿಸಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರಿ ಉದ್ಯೋಗದಲ್ಲಿಯೂ ಸ್ಥಳೀಯ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಇದೇ ವೇಳೆ ಹೇಳಿದರು.
ಕಳೆದ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಕಮಲ್ನಾಥ್ ಅವರು, ರಾಜ್ಯದ ಖಾಸಗಿ ವಲಯದ ಹುದ್ದೆಗಳು ನೆರೆ ರಾಜ್ಯಗಳ ಪಾಲಾಗುತ್ತಿವೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸ್ಥಳೀಯ ಯುವಕರಿಗೆ ಶೇ.70 ಮೀಸಲಾತಿ ಕಲ್ಪಿಸುವ ಖಾಸಗಿ ಉದ್ಯಮಗಳಿಗೆ ಪ್ರೋತ್ಸಾಹ ನೀಡುವುದಾಗಿ ಘೋಷಣೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.