ರಾಮಕಥೆ ಕೇಳಲು ಅಯೋಧ್ಯೆಗೆ ಬಂದ ಕಾಮಾಟಿಪುರ ಸ್ತ್ರೀಯರು!

Published : Dec 24, 2018, 09:22 AM ISTUpdated : Dec 24, 2018, 09:26 AM IST
ರಾಮಕಥೆ ಕೇಳಲು ಅಯೋಧ್ಯೆಗೆ  ಬಂದ ಕಾಮಾಟಿಪುರ ಸ್ತ್ರೀಯರು!

ಸಾರಾಂಶ

ರಾಮಕಥೆ ಕೇಳಲು ಅಯೋಧ್ಯೆಗೆ ಬಂದ ಕಾಮಾಟಿಪುರ ಸ್ತ್ರೀಯರು ! ಮೊರಾರಿ ಬಾಪು ಆಹ್ವಾನಕ್ಕೆ ಭಾರೀ ವಿರೋಧ | 

ಅಯೋಧ್ಯೆ (ಡಿ. 24): ಏಕಪತ್ನಿ ವ್ರತಸ್ತ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಶನಿವಾರ ಆಯೋಜನೆಗೊಂಡಿದ್ದ ರಾಮಕಥಾ ಕಾರ್ಯಕ್ರಮ ಹಿಂದೂ ಸಂಘಟನೆಗಳಿಂದಲೇ ಭಾರೀ ಆಕ್ಷೇಪಕ್ಕೆ ತುತ್ತಾಗಿದೆ. ಇದಕ್ಕೆ ಕಾರಣ, ಶನಿವಾರದ ಕಾರ್ಯಕ್ರಮಕ್ಕೆ ಮುಂಬೈನ ಕಾಮಾಟಿಪುರ (ವೇಶ್ಯಾಗೃಹಗಳಿರುವ ಪ್ರದೇಶದ ಹೆಸರು)ದ ನೂರಾರು ಮಹಿಳೆಯರು ಆಗಮಿಸಿದ್ದುದು.

ಲೈಂಗಿಕ ಕಾರ್ಯಕರ್ತೆಯರ ಜೀವನ ಬದಲಾವಣೆ ನಿಟ್ಟಿನಲ್ಲಿ ಪ್ರಸಿದ್ಧ ರಾಮಕಥಾ ಗಾಯಕರಾದ ಮೊರಾರಿ ಬಾಪು ಅವರು ಇತ್ತೀಚೆಗೆ ಮುಂಬೈನ ಕಾಮಾಟಿಪುರಕ್ಕೆ ತೆರಳಿ, ಅಲ್ಲಿನ ಮಹಿಳೆಯರೊಂದಿಗೆ ಚರ್ಚೆ ನಡೆಸಿದ್ದರು. ಜೊತೆಗೆ ಶನಿವಾರ (ಡಿ.22) ರಾಮಕಥಾ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಹೀಗಾಗಿ ಆಹ್ವಾನ ಮನ್ನಿಸಿ ಬಂದ ಮಹಿಳೆಯರು, ಶನಿವಾರ ಇಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ಎದುರಿಸಿದ್ದಾರೆ.

ತಮ್ಮ ಪಾಪಗಳನ್ನು ಕಳೆದುಕೊಳ್ಳಲು ಅಯೋಧ್ಯೆಗೆ ದೇಶದ ವಿವಿಧ ಭಾಗಗಳಿಂದ ಜನರು ಬರುತ್ತಾರೆ. ಹೀಗಿರುವಾಗ ಇಂಥ ಸ್ಥಳಕ್ಕೆ ಲೈಂಗಿಕ ಕಾರ್ಯಕರ್ತೆಯರನ್ನ ಆಹ್ವಾನಿಸುವುದು ತಪ್ಪು ಸಂದೇಶ ರವಾನಿಸುತ್ತದೆ ಎಂದು ದಂಡಿಯಾ ದೇಗುಲದ ಅರ್ಚಕ ಭರತ್‌ ವ್ಯಾಸ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲ ಸಂಘಟನೆಗಳು ಈ ಕುರಿತು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೂ ದೂರು ಸಲ್ಲಿಸಿದ್ದಾರೆ.

ಆದರೆ ಮೊರಾರಿ ಬಾಪು ಮಾತ್ರ, ರಾಮಚರಿತ ಮಾನಸ ಬರೆದಿರುವ ತುಳಸಿದಾಸರೇ, ರಾಮಾಯಣದಲ್ಲಿ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜೊತೆಗೆ ಅವರ ಜೀವನ ಸುಧಾರಣೆಗೆ ಪರಿಹಾರ ಸೂಚಿಸಿದ್ದಾರೆ ಎಂದು ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ