
ಬೆಂಗಳೂರು (ಜ.22): ಜಲ್ಲಿಕಟ್ಟಿಗೆ ಜಗತ್ತಿನಾದ್ಯಂತ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ, ಕಂಬಳ ಆಚರಣೆಗಾಗಿ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ ಪ್ರತಿಭಟನಲ್ಲಿ ಕಂಬಳ ಆಚರಣೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳ್ಳಿಸಿದ್ದಾರೆ.
ಮೊದಲು ಹಲಸೂರು ಕೆರೆ ಬಳಿ ಪ್ರತಿಭಟನೆಗೆ ಅನುಮತಿ ಪಡೆಯಲಾಗಿತ್ತು. ಆದರೆ ಅಲ್ಲಿ ಜಲ್ಲಿಕಟ್ಟು ಹೋರಾಟಗಾರರಿಗೆ ಅನುಮತಿ ನೀಡಲಾಗಿತ್ತು. ಹಾಗಾಗೀ ಫ್ರೀಡಮ್ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.