
ಉಡುಪಿ (ಜ.24): ಕಂಬಳ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಕಂಬಳ ನಡೆಯುತ್ತದೆ, ಎಂದಿದ್ದಾರೆ.
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ರವಿಶಂಕರ್ ಪ್ರಸಾದ್ ಜೊತೆ ಮಾತನಾಡುತ್ತೇನೆ. ಕಂಬಳದ ಕೋಣಗಳನ್ನು ಮಕ್ಕಳಂತೆ ಸಾಕುತ್ತಾರೆ. ಜಲ್ಲಿಕಟ್ಟುವಿನ ಜೊತೆ ಕಂಬಳದ ಹೋಲಿಕೆ ಬೇಡ ಎಂದು ಬಿಎಸ್’ವೈ ಹೇಳಿದ್ದಾರೆ.
ಹಾಗೇಯೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದೆ ಎಂದು ಕೇಂದ್ರದ ಕಡೆ ಬೊಟ್ಟು ಮಾಡುವುದು ಸರಿಯಲ್ಲ. ಒಂದೆರಡು ದಿನ ವಿಳಂಬವಾಗಬಹುದು. ರಾಜ್ಯ ಸರ್ಕಾರ ಇರುವ ಹಣ ಖರ್ಚು ಮಾಡಲಿ. ಸಿಎಂ’ಗೆ ಅಷ್ಟೂ ಕಾಮನ್ ಸೆನ್ಸ್ ಇಲ್ವಾ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.