ಅಯ್ಯಪ್ಪ ದರ್ಶನ ಪಡೆದ ಕನಕ ಮನೆಯಿಂದ ಔಟ್‌!

Published : Jan 23, 2019, 08:53 AM IST
ಅಯ್ಯಪ್ಪ ದರ್ಶನ ಪಡೆದ ಕನಕ ಮನೆಯಿಂದ ಔಟ್‌!

ಸಾರಾಂಶ

ಅಯ್ಯಪ್ಪ ದರ್ಶನ ಪಡೆದ ಕನಕ ಮನೆಯಿಂದ ಔಟ್‌: ಭಕ್ತರ ಕ್ಷಮೆ ಕೇಳುವವರೆಗೂ ಮನೆಗಿಲ್ಲ

ಕೊಚ್ಚಿ[ಜ.23]: ಸಂಪ್ರದಾಯಕ್ಕೆ ವಿರುದ್ಧವಾಗಿ ಶಬರಿಮಲೆ ದೇವಸ್ಥಾನ ಪ್ರವೇಶಿಸಿ ಅತ್ತೆಯಿಂದಲೇ ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಕೇರಳ ಮೂಲದ ಕನಕದುರ್ಗಾ ಅವರಿಗೆ ಇದೀಗ ಮನೆಯೊಳಗೆ ಸೇರಿಸಿಕೊಳ್ಳಲು ಅವರ ಕುಟುಂಬಸ್ಥರೇ ನಿರಾಕರಿಸಿದ್ದಾರೆ. ಶಬರಿಮಲೆ ಪ್ರವೇಶಿಸಿದ್ದಕ್ಕೆ ಅತ್ತೆಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಬಿಡುಗಡೆ ಹೊಂದಿದ ಕನಕದುರ್ಗಾ ಅವರು ಸರ್ಕಾರ ವಸತಿ ಗೃಹದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ 22ರಂದು ತಾನು ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿರುವ ಸಮಾರಂಭವೊಂದಕ್ಕೆ ತೆರಳುತ್ತಿರುವುದಾಗಿ ಮನೆಯಲ್ಲಿ ಸುಳ್ಳು ಹೇಳಿದ ಕನಕದುರ್ಗಾ ಅವರು ಶಬರಿಮಲೆಗೆ ಹೋಗಿದ್ದಾರೆ. ಡಿ.24ರಂದು ಭಕ್ತಾದಿಗಳ ವಿರೋಧದಿಂದಾಗಿ ಕನಕದುರ್ಗಾ(39) ಮತ್ತು ಬಿಂದು(40) ದೇವಸ್ಥಾನ ಪ್ರವೇಶ ಸಾಧ್ಯವಾಗಿರಲಿಲ್ಲ. ಇದರ ಹೊರತಾಗಿಯೂ, ಸ್ಥಳದಿಂದ ಕಾಲ್ಕಿತ್ತದ ಈ ಇಬ್ಬರು ಕೊನೆಗೆ ಪೊಲೀಸರ ಭದ್ರತೆಯಲ್ಲಿ ಜ.2ರಂದು ಅಯ್ಯಪ್ಪನ ದರ್ಶನ ಪಡೆದಿದ್ದರು.

ಇದರಿಂದ ಕೋಪಗೊಂಡ ಕನಕದುರ್ಗಾ ಅವರ ಅತ್ತೆ-ಮಾವಂದಿರು ಆಕೆಯನ್ನು ಮನೆಯಿಂದ ಹೊರದಬ್ಬಿದ್ದಾರೆ. ಅಲ್ಲದೆ, ಆಕೆ ದೇವಸ್ಥಾನ ಪ್ರವೇಶಕ್ಕೆ ಪ್ರತಿಯಾಗಿ ಸಾರ್ವಜನಿಕವಾಗಿ ಹಿಂದೂ ಸಮುದಾಯದ ಕ್ಷಮೆ ಕೇಳುವವರೆಗೂ ಕನಕದುರ್ಗಾ ಅವರನ್ನು ಮನೆಯೊಳಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಆಕೆಯ ಕುಟುಂಬಸ್ಥರು ಹೇಳುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!