ಜೆಡಿಎಸ್ ಕೈ ಹಿಡಿಯಲಿದ್ದಾರಾ ಬಿಜೆಪಿ ಶಾಸಕ?

Published : Jun 02, 2019, 01:43 PM ISTUpdated : Jun 02, 2019, 02:08 PM IST
ಜೆಡಿಎಸ್ ಕೈ ಹಿಡಿಯಲಿದ್ದಾರಾ ಬಿಜೆಪಿ ಶಾಸಕ?

ಸಾರಾಂಶ

ಬಿಜೆಪಿ ಶಾಕರೋರ್ವರು ಪಕ್ಷ ತೊರೆದು ಜೆಡಿಎಸ್ ಕೈ ಹಿಡಿಯಲಿದ್ದಾರೆ ಎನ್ನುವ ಚರ್ಚೆಯೊಂದು ಎಲ್ಲೆಡೆ ಆಗುತ್ತಿದೆ. ಅದಕ್ಕೆ ಕಾರಣ ಏನು?

ಕೊಪ್ಪಳ :  ಕೊಪ್ಪಳದ ಬಿಜೆಪಿ ಶಾಸಕರೋರ್ವರು ಜೆಡಿಎಸ್ ಸೇರಲಿದ್ದಾರ ಎನ್ನುವ ಸುದ್ದಿಯೊಂದು ಎಲ್ಲೆಡೆ ಚರ್ಚೆಯಾಗುತ್ತಿದೆ. 

ಕೊಪ್ಪಳದ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರ್ ಜೆಡಿಎಸ್ ಗೆ ತೆರಳಲಿದ್ದಾರೆ ಎನ್ನುವ ವದಂತಿ ಹಬ್ಬಿದೆ.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆಪ್ತರಾದ ಬಸವರಾಜ, ವೆಂಕಟರಾವ್ ನಾಡಗೌಡ  ನೇತೃತ್ವದಲ್ಲಿ ಜೆಡಿಎಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ. 

ನಾಡಗೌಡ ಜೊತೆಗೆ ಬಸವರಾಜು ಅವರು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಫೊಟೊ ಒಂದು ವೈರಲ್ ಆಗಿದೆ. ಇದರಿಂದ ಹಲವು ದಿನಗಳಿಂದ ಇರುವ ವದಂತಿಗೆ ಇದೀಗ ಪುಷ್ಟಿ ಸಿಕ್ಕಿದಂತಾಗಿದೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ವಿರುದ್ಧ ಸ್ಪರ್ಧಿಸಿ ಬಸವರಾಜ್ ಗೆಲುವು ಸಾಧಿಸಿದ್ದು, ಇದೀಗ ಫೊಟೊ ವೈರಲ್ ಆಗಿದ್ದರಿಂದ ಬಿಜೆಪಿ ಪಾಳಯದಲ್ಲಿ ತಳಮಳ ಎದುರಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!