ಹುಂಡಿ ರಕ್ಷಿಸಿಕೊಳ್ಳಲಾಗದ ತಿಮ್ಮಪ್ಪನಿಂದ ಭಕ್ತರ ರಕ್ಷಣೆ ಸಾಧ್ಯವೇ : ಕನಿಮೋಳಿ

Published : Jan 13, 2018, 09:22 AM ISTUpdated : Apr 11, 2018, 12:49 PM IST
ಹುಂಡಿ ರಕ್ಷಿಸಿಕೊಳ್ಳಲಾಗದ ತಿಮ್ಮಪ್ಪನಿಂದ ಭಕ್ತರ ರಕ್ಷಣೆ ಸಾಧ್ಯವೇ : ಕನಿಮೋಳಿ

ಸಾರಾಂಶ

ದರ್ಶನಕ್ಕೆ ಬಡವರು ಉದ್ದದ ಸರತಿ ಸಾಲಲ್ಲಿ ನಿಂತು ಕೊಳೆಯುತ್ತಾರೆ. ತನ್ನ ಹುಂಡಿಯನ್ನೇ ರಕ್ಷಿಸಿಕೊಳ್ಳಲಾಗದ ತಿಮ್ಮಪ್ಪನಿಗೆ ಭಕ್ತರ ರಕ್ಷಣೆ ಮಾಡಲು ಸಾಧ್ಯವೇ? ವೆಂಕಟೇಶ್ವರ ನಿಜವಾಗಿಯೂ ದೇವರೇ ಆಗಿದ್ದರೆ ಆತನಿಗೆ ಭದ್ರತೆ ಏಕೆ ಬೇಕು?’ ಎಂದು ಕನಿಮೋಳಿ ಪ್ರಶ್ನಿಸಿದ್ದರು ಎಂದು ಹೇಳಲಾಗಿದೆ.

ನವದೆಹಲಿ: ತಿರುಪತಿ ತಿಮ್ಮಪ್ಪನ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಡಿಎಂಕೆ ನಾಯಕಿ ಕನಿಮೋಳಿ ವಿರುದ್ಧ ಹೈದರಾಬಾದ್‌ನ ಸೈದಾಬಾದ್ ಠಾಣೆಯಲ್ಲಿ ವಕೀಲರೊಬ್ಬರು ದೂರೊಂದನ್ನು ದಾಖಲಿಸಿ ದ್ದಾರೆ. ‘ತಿರುಪತಿ ವೆಂಕಟೇಶ ಕೇವಲ ಶ್ರೀಮಂತರ ದೇವರು.

ದರ್ಶನಕ್ಕೆ ಬಡವರು ಉದ್ದದ ಸರತಿ ಸಾಲಲ್ಲಿ ನಿಂತು ಕೊಳೆಯುತ್ತಾರೆ. ತನ್ನ ಹುಂಡಿಯನ್ನೇ ರಕ್ಷಿಸಿಕೊಳ್ಳಲಾಗದ ತಿಮ್ಮಪ್ಪನಿಗೆ ಭಕ್ತರ ರಕ್ಷಣೆ ಮಾಡಲು ಸಾಧ್ಯವೇ? ವೆಂಕಟೇಶ್ವರ ನಿಜವಾಗಿಯೂ ದೇವರೇ ಆಗಿದ್ದರೆ ಆತನಿಗೆ ಭದ್ರತೆ ಏಕೆ ಬೇಕು?’ ಎಂದು ಕನಿಮೋಳಿ ಪ್ರಶ್ನಿಸಿದ್ದರು ಎಂದು ಹೇಳಲಾಗಿದೆ.

ಕನಿಮೋಳಿ ಅವರ ಹೇಳಿಕೆಯನ್ನು ಖಂಡಿಸಿ ಐಪಿಸಿ ಸೆಕ್ಷನ್ 295 -ಎ (ಧಾರ್ಮಿಕ ಭಾವನೆಗೆ ಘಾಸಿ) ಅಡಿ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಕಾನೂನು ತಜ್ಞರ ಸಲಹೆ ಕೇಳಿ ದೂರು ಸ್ವೀಕಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ