
ಬೆಂಗಳೂರು, [ಸೆ.24]: ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಿಚಾರಣೆ ಮುಗಿದಿದ್ದು, ಆದೇಶವನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಲಾಗಿದೆ.
ಮ್ಯಾಜಿಸ್ಟ್ರೀಟ್ ಕೋರ್ಟ್ ಇಂದು ದುನಿಯಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಆದರೆ, ಜಾಮೀನು ನೀಡಬೇಕೋ ಬೇಡವೋ ಎನ್ನುವ ಆದೇಶವನ್ನು ಇದೇ ಸೆ.26ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದ್ರಿಂದ ಜಂಗ್ಲಿ ವಿಜಯ್ಗೆ ಇನ್ನೆರಡು ದಿನ ಜೈಲೆ ಗತಿಯಾಗಿದೆ.
ರೌಡಿಶೀಟರ್ಗಳ ಪಟ್ಟಿಗೆ ಕರಿಚಿರತೆ ದುನಿಯಾ ವಿಜಿ..?
ಮಾರುತಿಗೆ 15 ಸ್ಟಿಚ್ ಹಾಕಲಾಗಿದ್ದು, ಇನ್ನು ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸರ್ಕಾರಿ ಪರ ವಕೀಲ ವಾದ ಮಂಡನೆ ಮಾಡಿದರು. ಇದನ್ನು ಪರಿಗಣಿಸಿದ ಕೋರ್ಟ್ ವಿಜಿ ಜಾಮೀನು ಆದೇಶವನ್ನು ಬುಧವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ದುನಿಯಾ ವಿಜಯ್ ಪ್ರಕರಣದ ಸುದ್ದಿಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.