
ಬೆಂಗಳೂರು, (ಅ.1): ಪಾನಿಪುರಿ ಕಿಟ್ಟಿ ಸಹೋದರನ ಮಗ ಮಾರುತಿಗೌಡ ಮೇಲಿನ ಹಲ್ಲೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಗೆ ಬಿಗ್ ರಿಲೀಫ್ ಸಿಕ್ಕಿದೆ.ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ದುನಿಯಾ ವಿಜಿಗೆ ಜಾಮೀನು ನೀಡಲಾಗಿದೆ. ಬೆಂಗಳೂರು ಸಿಟಿ ಸೆಷನ್ಸ್ ಕೋರ್ಟ್ ಇಂದು ವಿಜಿಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ.
"
2ನೇ ಪತ್ನಿಗಾಗಿ ಜೈಲಿಂದ ದುನಿಯಾ ವಿಜಿ ಪತ್ರ
ಒಂದು ಲಕ್ಷ ಬಾಂಡ್ ಹಾಗೂ ಇಬ್ಬರನ್ನು ಶ್ಯೂರಿಟಿ ನೀಡಲು ಕೋರ್ಟ್ ಸೂಚಿಸಿದೆ. ನೀವು ಹೀರೋ ಎಲ್ಲರಿಗೂ ರೋಲ್ ಮಾಡೆಲ್ ಆಗಬೇಕು. ಇಂತಹ ಪ್ರಕರಣದಡಿಯಲ್ಲಿ ನೀವು ಕೋರ್ಟ್ ಮೆಟ್ಟಿಲೇರಬೇಡಿ ದುನಿಯಾ ವಿಜಿಗೆ ಜಡ್ಜ್ ರಾಮಲಿಂಗೇಗೌಡ ಸಲಹೆ ಮೂಲಕ ಪರೋಕ್ಷವಾಗಿ ಎಚ್ಚರಿಯನ್ನೂ ಸಹ ನೀಡಿದ್ದಾರೆ..
'ನನ್ನ ಮಕ್ಕಳ ಚಿನ್ನಾಭರಣಗಳನ್ನು ಕದ್ದು ಕೀರ್ತಿಗೌಡ ಎಸ್ಕೇಪ್'
ಜಾಮೀನು ಮಂಜೂರು ಆಗುತ್ತಿದ್ದಂತೆಯೇ ಹೊಸಕೆರೆಹಳ್ಳಿಯಲ್ಲಿರುವ ದುನಿಯಾ ವಿಜಿ ನಿವಾಸದ ಮುಂದೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.