
ಬೆಂಗಳೂರು(ಅ.23): ಪ್ರಸ್ತುತ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ನೀಡಿದೆ.
ಮೊತ್ತವನ್ನು 1 ಲಕ್ಷದಿಂದ 3 ಲಕ್ಷಕ್ಕೆ ಏರಿಸುವುದರ ಜೊತೆ ನೀಡುವ ಚಿನ್ನ 20 ಗ್ರಾಮ್ ನಿಂದ 25 ಗ್ರಾಂಗೆ ಏರಿಸುವ ಬಗ್ಗೆ ಕೂಡಾ ಪ್ರಸ್ತಾವನೆಯಲ್ಲಿ ಉಲ್ಲೇಖ ಮಾಡಲಾಗಿದೆ. ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದರೆ ಈ ವರ್ಷವೇ ಮೊತ್ತ ಹೆಚ್ಚಳವಾಗುವ ಸಾಧ್ಯತೆಯಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ಇತರ ಎಲ್ಲಾ ರಾಜ್ಯ ಪ್ರಶಸ್ತಿಗಳ ಮೊತ್ತ 3 ಲಕ್ಷ ರೂ. ಇದೆ. ರಾಜ್ಯ ಸರ್ಕಾರದಿಂದ ನೀಡುವ ರಾಷ್ಟ್ರೀಯ ಪುರಸ್ಕಾರಗಳ ಮೊತ್ತ 10 ಲಕ್ಷದವರೆಗೂ ಇದೆ. ಹೀಗಾಗಿ ರಾಜ್ಯೋತ್ಸವ ಪ್ರಶಸ್ತಿ ಹೆಚ್ಚಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮನವಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.