
ಮೈಸೂರು[ನ.15] "ಬದುಕಲು ಕಲಿಯಿರಿ" ಕೃತಿ ಮೂಲಕ ಮನೆಮಾತಾಗಿದ್ದ ಶ್ರೀ ಜಗದಾತ್ಮಾನಂದ ಸ್ವಾಮೀಜಿ (89) ಗುರುವಾರ ರಾತ್ರಿ 7.30ಕ್ಕೆ ವಿಧಿವಶರಾದರು. ಮೃತರು ಕೊಡಗಿನ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಸಂಸ್ಥಾಪಕರು.
ನ್ಯುಮೋನಿಯಾದಿಂದ ಕಳೆದೊಂದು ತಿಂಗಳಿಂದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ರೀಗಳ "ಬದುಕಲು ಕಲಿಯಿರಿ" ಸರಣಿಯ ಪುಸ್ತಕಗಳು 9 ಭಾಷೆಗೆ ಅನುವಾದಗೊಂಡು ದಾಖಲೆ ಮೆರೆದಿವೆ.ನಾಳೆ ರಾಮಕೃಷ್ಣ ಶಾರದಾಶ್ರಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ರಾಮಕೃಷ್ಣಾಶ್ರಮದ ಸ್ವಾಮಿ ಜಗದಾತ್ಮಾನಂದ ಅವರು ಬರೆದ 'ಬದುಕಲು ಕಲಿಯಿರಿ ಎಂಬ ಪುಸ್ತಕ ಕನ್ನಡ ಪ್ರಕಾಶನದಲ್ಲಿ ಒಂದು ದಾಖಲೆಯನ್ನೇ ನಿರ್ಮಿಸಿದೆ. ಮೊದಲನೆಯ ಭಾಗ 1981ರಲ್ಲಿ ಪ್ರಕಟವಾಗಿದ್ದು, ಹದಿಮೂರನೆಯ ಮುದ್ರಣ 2003 ರಲ್ಲಿ ಪ್ರಕಟವಾಯಿತು. ಈ ವೇಳೆ, ಒಟ್ಟು 85 ಸಾವಿರ ಪ್ರತಿಗಳು ಮಾರಾಟವಾಗಿದ್ದವು. ಇದರ ಎರಡನೆಯ ಭಾಗ 1986ರಲ್ಲಿ ಬೆಳಕಿಗೆ ಬಂತು. ಇದರ ಒಂಭತ್ತನೆಯ ಮುದ್ರಣ 2002 ರಲ್ಲಿ ಪ್ರಕಟವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.