ದುನಿಯಾ ವಿಜಿಗೆ ಟ್ರಬಲ್: ಕನ್ನಡ ಚಿತ್ರರಂಗದಿಂದ ಬಹಿಷ್ಕರಿಸಲು ಆಗ್ರಹ

Published : Sep 24, 2018, 03:26 PM IST
ದುನಿಯಾ ವಿಜಿಗೆ ಟ್ರಬಲ್: ಕನ್ನಡ ಚಿತ್ರರಂಗದಿಂದ ಬಹಿಷ್ಕರಿಸಲು ಆಗ್ರಹ

ಸಾರಾಂಶ

ಮರುತಿಗೌಡ ಮೇಲೆ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದುನಿಯಾ ವಿಜಿಗೆ ಪ್ರಾಬ್ಲಂ ಮೇಲೆ ಪ್ರಾಬ್ಲಂ ಎದುರಾಗುತ್ತಿವೆ. ಈಗಾಗಲೇ ಮಾರುತಿಗೌಡ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಿಜಿಯನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕೆಂದು ಒತ್ತಾಯಗಳು ಕೇಳಿಬರುತ್ತಿವೆ.

ಬೆಂಗಳೂರು, [ಸೆ.24]: ಮರುತಿಗೌಡ ಮೇಲೆ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದುನಿಯಾ ವಿಜಿಗೆ ಪ್ರಾಬ್ಲಂ ಮೇಲೆ ಪ್ರಾಬ್ಲಂ ಎದುರಾಗುತ್ತಿವೆ. ಈಗಾಗಲೇ ಮಾರುತಿಗೌಡ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಿಜಿಯನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕೆಂದು ಒತ್ತಾಯಗಳು ಕೇಳಿಬರುತ್ತಿವೆ.

ದುನಿಯಾ ವಿಜಿ ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದು, ಚಿತ್ರರಂಗದ ಘನತೆ ಗೌರವಕ್ಕೆ ದಕ್ಕೆ ತರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದುನಿಯಾ ವಿಜಿಯನ್ನು ಕನ್ನಡ ಚಿತ್ರರಂಗದಿಂದ ಬಹಿಷ್ಕರಿಸುವಂತೆ ಕರ್ನಾಟಕ ಸಂಘಟನೆ ಒಕ್ಕೂಟ ಆಗ್ರಹಿಸಿದೆ.

ವಿಜಿಯನ್ನು ಬ್ಯಾನ್ ಮಾಡುವಂತೆ ಇಂದು ಫಿಲಂ ಚೇಂಬರ್​​ಗೆ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ದೂರು ನೀಡಿದ್ದಾರೆ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ದುನಿಯಾ ವಿಜಿ ಅವರ ಹೆಸರು ಕೇಳಿಬರುತ್ತಿದ್ದು, ಈ ಬಗ್ಗೆ ಫಿಲಂ ಚೇಂಬರ್​​ ಸಹ ಗಂಭೀರವಾಗಿ ತೆಗೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!