ಏ. 28ರಂದು 'ಬೆಂಗಳೂರು ಬಂದ್'; ಕನ್ನಡಪರ ಸಂಘಟನೆಗಳ ಕರೆ

Published : Apr 19, 2017, 08:34 AM ISTUpdated : Apr 11, 2018, 12:54 PM IST
ಏ. 28ರಂದು 'ಬೆಂಗಳೂರು ಬಂದ್'; ಕನ್ನಡಪರ ಸಂಘಟನೆಗಳ ಕರೆ

ಸಾರಾಂಶ

ಕಟ್ಟಪ್ಪ ವಿರುದ್ಧದ ಹೋರಾಟದಲ್ಲಿ ಕನ್ನಡ ಸಂಘಟನೆಗಳ ಒಗ್ಗಟ್ಟು ಕ್ಷೀಣಿಸಿದೆ. ಕನ್ನಡಹೋರಾಟಗಾರರಲ್ಲಿನ ಒಗ್ಗಟ್ಟು ಮುರಿದುಬೀಳುತ್ತಿದೆ ಎಂದು ಕೇಳಿಬರುತ್ತಿರುವ ಸುದ್ದಿಯನ್ನು ವಾಟಾಳ್ ನಾಗರಾಜ್ ಸಾರಸಗಟಾಗಿ ತಳ್ಳಿಹಾಕಿದ್ದಾರೆ.

ಬೆಂಗಳೂರು(ಏ. 19): 'ಕಟ್ಟಪ್ಪ' ಸತ್ಯರಾಜ್ ಕನ್ನಡಿಗರ ಕ್ಷಮೆ ಯಾಚಿಸುವವರೆಗೂ ಬಾಹುಬಲಿ-2 ಸಿನಿಮಾನವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಪುನರುಚ್ಚರಿಸಿವೆ. ಅಲ್ಲದೇ, ಬಾಹುಬಲಿ ಬಿಡುಗಡೆ ವಿರೋಧಿಸಿ ಏ. 28ರಂದು ಬೆಂಗಳೂರು ಬಂದ್'ಗೆ ಕರೆಕೊಡಲಾಗಿದೆ. ನಗರದ ಪ್ರೆಸ್'ಕ್ಲಬ್'ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಹೋರಾಟಗಾರರು, ತಾವು ಒಗ್ಗಟ್ಟಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಬಾಹುಬಲಿ-2 ಸಿನಿಮಾ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದೆ. ಅಂದೇ ಬೆಂಗಳೂರು ಬಂದ್ ಆಚರಿಸಲು ಕನ್ನಡ ಸಂಘಟನೆಗಳು ನಿರ್ಧರಿಸಿವೆ. ಕನ್ನಡ ದ್ರೋಹಿ ಸತ್ಯರಾಜ್ ಕ್ಷಮೆ ಕೇಳದೇ ಇದ್ದರೆ ಅಂದು ಬಂದ್ ಆಚರಿಸುವುದು ನಿಶ್ಚಿತ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಏ.28ರಂದು ಟೌನ್'ಹಾಲ್'ನಿಂದ ಕನ್ನಡಿಗರ ಸ್ವಾಭಿಮಾನದ ಮೆರವಣಿಗೆ ನಡೆಯುವುದೆಂದೂ ವಾಟಾಳ್ ತಿಳಿಸಿದ್ದಾರೆ.

ಇದೇ ವೇಳೆ, ಕಟ್ಟಪ್ಪ ವಿರುದ್ಧದ ಹೋರಾಟದಲ್ಲಿ ಕನ್ನಡ ಸಂಘಟನೆಗಳ ಒಗ್ಗಟ್ಟು ಕ್ಷೀಣಿಸಿದೆ. ಕನ್ನಡಹೋರಾಟಗಾರರಲ್ಲಿನ ಒಗ್ಗಟ್ಟು ಮುರಿದುಬೀಳುತ್ತಿದೆ ಎಂದು ಕೇಳಿಬರುತ್ತಿರುವ ಸುದ್ದಿಯನ್ನು ವಾಟಾಳ್ ನಾಗರಾಜ್ ಸಾರಸಗಟಾಗಿ ತಳ್ಳಿಹಾಕಿದ್ದಾರೆ. ಎಲ್ಲಾ ಹೋರಾಟಗಾರರೂ ಇಲ್ಲಿಯೇ ಇದ್ದೇವೆ. ತಮ್ಮ ಒಗ್ಗಟ್ಟಲ್ಲಿ ಯಾವುದೇ ಚ್ಯುತಿ ಇಲ್ಲ ಎಂದು ವಾಟಾಳ್ ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು