ಆದಿವಾಸಿಗಳ ಹೋರಾಟಕ್ಕೆ‘ಕನ್ನಡಪ್ರಭ' ಮುನ್ನುಡಿ

Published : Apr 26, 2017, 06:41 AM ISTUpdated : Apr 11, 2018, 01:11 PM IST
ಆದಿವಾಸಿಗಳ ಹೋರಾಟಕ್ಕೆ‘ಕನ್ನಡಪ್ರಭ' ಮುನ್ನುಡಿ

ಸಾರಾಂಶ

ಈ ವರದಿ ಓದಿದ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ತಿತಿಮತಿ ಬಳಿಯ ಚೇಣಿ ಹಡ್ಲು ಹಾಡಿಯಲ್ಲಿರುವ 150-200 ಕುಟುಂಬಗಳು ಅರಣ್ಯದೊಳಗೆ ಜನಸಂಪರ್ಕ ಸಭೆ ಆಯೋಜಿಸಿದ್ದರು.

ಕೇಂದ್ರ ಹುಲಿ ಸಂರಕ್ಷಣಾ ಪ್ರಾಧಿಕಾರದ ಸುತ್ತೋಲೆಯ ಆಧಾರದಲ್ಲಿ ‘ಹುಲಿಗಳ ಸಂರಕ್ಷಣೆಯ ಜೊತೆಗೆ ಅರಣ್ಯವಾಸಿಗಳ ಹಿತವೂ ಮುಖ್ಯ' ಶೀರ್ಷಿಕೆಯಡಿ ಕನ್ನಡ ಪ್ರಭದಲ್ಲಿ ಏ.17ರಂದು ಪ್ರಕಟವಾಗಿದ್ದ ಸಂಪಾದಕೀಯ ಇದೀಗ ಹೊಸ ಹೋರಾಟಕ್ಕೆ ಮುನ್ನುಡಿಯಾಗಿದೆ. ಈ ವರದಿಯ ಪರಿಣಾಮವಾಗಿ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಲೆತಲಾಂತರ ಗಳಿಂದ ಬದುಕು ಕಟ್ಟಿಕೊಂಡಿರುವ ಅಡವಿ ಮಕ್ಕಳು, ಕಾಡಿನಲ್ಲಿ ತುರ್ತು ಸಭೆ ನಡೆಸಿ ಈ ಸುತ್ತೋಲೆಯನ್ನು ಹಿಂಪಡೆಯುವ ದಿಸೆಯಲ್ಲಿ ನಡೆಸ ಬೇಕಾದ ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ ನಡೆಸಿದ್ದಾರೆ. 
ಈ ವರದಿ ಓದಿದ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ತಿತಿಮತಿ ಬಳಿಯ ಚೇಣಿ ಹಡ್ಲು ಹಾಡಿಯಲ್ಲಿರುವ 150-200 ಕುಟುಂಬಗಳು ಅರಣ್ಯದೊಳಗೆ ಜನಸಂಪರ್ಕ ಸಭೆ ಆಯೋಜಿಸಿದ್ದರು. ಸಭೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಜನಪ್ರತಿನಿಧಿಗಳು, ಬುಡಕಟ್ಟು ಕೃಷಿಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. 10 ದಿನದಲ್ಲಿ ಸುತ್ತೋಲೆಯನ್ನು ವಾಪಸ್‌ ಪಡೆಯದಿದ್ದರೆ ನಾಗರ ಹೊಳೆ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಮುಸ್ಲಿಮರು ಸೂರ್ಯ-ನದಿ ಪೂಜಿಸಬೇಕು, RSS ನಾಯಕನ ಹೇಳಿಕೆಯಿಂದ ಚರ್ಚೆ ಶುರು
ದುರಂಧರ್ ಸ್ಟೈಲ್‌ನಲ್ಲಿ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನಿ ಲೇಡಿ ಸ್ಪೈ; ವಿಡಿಯೋ ಭಾರೀ ವೈರಲ್!