
ಧಾರವಾಡ (ಡಿ.19): ಡಾ.ಚಂದ್ರಶೇಖರ ಕಂಬಾರ ಅಧ್ಯಕ್ಷತೆಯಲ್ಲಿ ಜ.೦4 ರಿಂದ ಮೂರು ದಿನಗಳ ಕಾಲ ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಸಿದ್ಧಗೊಂಡಿದೆ.
ಜ.04 ರಂದು ಬೆಳಗ್ಗೆ 11 ಕ್ಕೆ ನಡೆಯುವ ಸಮಾರಂಭದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.
ಧಾರವಾಡದ ಗರಿಮೆಗಳಾದ ಕರ್ನಾಟಕ ವಿದ್ಯಾವರ್ಧಕ ಸಂಘ, ಕರ್ನಾಟಕ ವಿಶ್ವವಿದ್ಯಾಲಯ, ಡಯಟ್ ಹಾಗೂ ಸಾಹಿತ್ಯ ಮತ್ತು ಸಂಗೀತದ ಹಿನ್ನೆಲೆಯ ಕಲ್ಪನೆಯಲ್ಲಿ ಕಲಾವಿದ ಮಹೇಶ ಪತ್ತಾರ ರಚಿಸಿದ ಲಾಂಛನವನ್ನು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಬಿಡುಗಡೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಲಾಂಛನ ಸೇರಿ ಕನ್ನಡದ ಬಾವುಟ, ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮನ ಪ್ರತಿಮೆ, ಪುಸ್ತಕಗಳ ಹೊತ್ತಿಗೆ, ಸಂಗೀತದ ಪರಿಕರಗಳನ್ನು ಒಳಗೊಂಡ ಲಾಂಛನ ಇದಾಗಿದೆ. ಲಾಂಛನ ಬಿಡುಗಡೆ ಜತೆಗೆ, ಸಮ್ಮೇಳನದ ಮಾಹಿತಿ ಇಡೀ ಜಗತ್ತಿಗೆ ಪಸರಿಸಲು ಸಿದ್ಧವಾದ ವೆಬ್ಸೈಟ್( (abkssdwd.org) ಅನ್ನು ಸಹ ಜಿ.ಪಂ. ಸಭಾಂಗಣದಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಚಿವರು ಲೋಕಾರ್ಪಣೆಗೊಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.