
ಮೂಡಿಗೆರೆ[ಅ.17] ಈಕೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಬಾಲಕಿ. ಹೆಸರು ನಮನ. ಎಲ್ಲರಿಗೂ ನಮಿಸುತ್ತಲೆ ಮೂಡಿಗೆರೆ ತಾಲೂಕಿನ ಆಲೇಕಾನ್ ಹೊರಟ್ಟಿಯಲ್ಲಿ ನಡೆಯುವ ಕಥಾ ಕಮ್ಮಟಕ್ಕೆ ಆಹ್ವಾನ ನೀಡಿದ್ದಾಳೆ.
ಕನ್ನಡ ಸಾಹಿತ್ಯ ಪರಿಷತ್ತು, ಮೂಡಿಗೆರೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಣಕಲ್ ಹೋಬಳಿ ಆಶ್ರಯದಲ್ಲಿ 'ಕಥಾ ಕಮ್ಮಟ-2018'ನ್ನು ಅಕ್ಟೋಬರ್ 21 ಭಾನುವಾರ ಆಯೋಜನೆ ಮಾಡಲಾಗಿದೆ. ಅದೇ ದಿನ ಬೆಳಗ್ಗೆ 9.30ಕ್ಕೆ ಕಮ್ಮಟವನ್ನು "ನಾನು ಅವನಲ್ಲ ಅವಳು" ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಚಲನಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಉದ್ಘಾಟಿಸಲಿದ್ದಾರೆ.
ಯಾವ ಕಾರಣಕ್ಕೆ ಪತ್ರ ಬರೆದಿದ್ದಳು? ನಮ್ಮ ಊರು ಚಿಕ್ಕಮಗಳೂರು ಜಿಲ್ಲೆಯ ಗಡಿಯಂಚಿನ ಗ್ರಾಮ ಮೂಡಿಗೆರೆ ತಾಲೂಕಿನ ಆಲೇಕಾನ್ ಹೊರಟ್ಟಿಯಲ್ಲಿ ಮೂಲ ಸೌಕರ್ಯ ಯಾವುದು ಇಲ್ಲ. ಇದನ್ನು ಕೂಡಲೆ ಸರಿ ಪಡಿಸಬೇಕು ಎಂದು ಪ್ರಧಾನಿ ಕಚೇರಿಗೆ ನಮನ ವರ್ಷದ ಹಿಂದೆ ಪತ್ರ ಬರೆದಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತಗರತಿ ವಿದ್ಯಾರ್ಥಿನಿಯಾಗಿದ್ದ ನಮನ, ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರಧಾನಿ ಕಚೇರಿಯ ಸಿಬ್ಬಂದಿ ಈ ತಿಂಗಳಿನಲ್ಲಿ ಸ್ಪಂದಿಸಿದ್ದು ಚಿಕ್ಕಮಗಳೂರು ಡಿಸಿ ಕಚೇರಿಯಿಂದ ವಿವರಣೆ ಪಡೆದುಕೊಂಡಿದ್ದರು.
ಚಾರ್ಮಾಡಿ ಘಾಟ್ ನೆತ್ತಿಯ ಮೇಲೆ ಸಾಹಿತ್ಯದ ಕಸರತ್ತು!
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.