ಕನ್ನಡ ಸುದ್ದಿವಾಹಿನಿ ಪತ್ರಕರ್ತ ನಿಧನ, ಅಂಗಾಂಗ ದಾನ ಮಾಡಿದ ಪೋಷಕರು

Published : Jan 16, 2019, 10:32 PM ISTUpdated : Jan 16, 2019, 10:38 PM IST
ಕನ್ನಡ ಸುದ್ದಿವಾಹಿನಿ ಪತ್ರಕರ್ತ ನಿಧನ, ಅಂಗಾಂಗ ದಾನ ಮಾಡಿದ ಪೋಷಕರು

ಸಾರಾಂಶ

ಆ ಯುವಕನ ಕಣ್ಣಲ್ಲಿ ಮಾದ್ಯಮ ಲೋಕದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಹಸಿವಿತ್ತು. ಆದರೆ ವಿಧಿ ಅವರನ್ನು ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ತನ್ನ ತೆಕ್ಕೆಗೆ ಕರೆದುಕೊಂಡಿತು. ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಈ ಲೋಕ ತೊರೆದಿದ್ದಾರೆ.

ಬೆಂಗಳೂರು(ಜ.16] ಅನಾರೋಗ್ಯದಿಂದ  ಆಸ್ಪತ್ರೆಗೆ ದಾಖಲಾಗಿದ್ದ  ಖಾಸಗಿ ಸುದ್ದಿ ವಾಹಿನಿ ದಿಗ್ವಿಜಯ ನ್ಯೂಸ್‌ನ ಸಿಬ್ಬಂದಿ ಅಮಿತ್ ತುಬಾಚಿ​ (24) ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿ ಆದರ್ಶಪ್ರಾಯರಾಗಿದ್ದಾರೆ.

ಒಂದೂವರೆ ವರ್ಷದಿಂದ ದಿಗ್ವಿಜಯ ನ್ಯೂಸ್ ಪ್ರೊಡಕ್ಷನ್ ವಿಭಾಗದಲ್ಲಿ ಪ್ರೊಡಕ್ಷನ್ ಅಸೋಸಿಯೇಟ್ ಆಗಿ ಅಮಿತ್ ಕಾರ್ಯನಿರ್ವಹಿಸುತ್ತಿದ್ದರು. 

ನೌಕರ ಹೃದಯಾಘಾತದಿಂದ ಮೃತಪಟ್ಟರೂ ವಿಮೆ ಹಣ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿಯ ಅಮಿತ್ ಮೂರು ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅವರ ಹುಟ್ಟೂರಿನಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ದಾವಣಗೆರೆ ಮಹಿಳೆಯನ್ನ ಕಚ್ಚಿಕೊಂದ 2 ರಾಟ್‌ವೀಲರ್ ನಾಯಿಗಳು ಜನರ ಹಲ್ಲೆಯಿಂದ ಸಾವು; ಶ್ವಾನಗಳ ಮಾಲೀಕ ಬಂಧನ