
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ಪುನರ್ ರಚನೆಯಾಗಿದ್ದು, ರಾಜ್ಯದ ಶ್ರೀನಿವಾಸ್ ಬಿ.ವಿ. ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿದಿದ್ದಾರೆ.
2016ರಲ್ಲಿ ಸೋನಿಯಾ ಅಧ್ಯಕ್ಷರಾಗಿದ್ದಾಗ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಅವರು ಇದೀಗ ರಾಹುಲ್ ಟೀಂನಲ್ಲಿಯೂ ಸ್ಥಾನ ಪಡೆದು ಕೊಂಡಿದ್ದಾರೆ.
ರಾಹುಲ್ ಅವರು 44 ಜನರನ್ನು ಒಳಗೊಂಡ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು ಇದರಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗ ಶ್ರೀನಿವಾಸ್ ಆಗಿದ್ದಾರೆ.
ಯುವ ಕಾಂಗ್ರೆಸ್’ನ ಉತ್ತರ ಪ್ರದೇಶದ ಘಟಕದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶ್ರೀನಿವಾಸ್ ಆ ಬಳಿಕ ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಆ ರಾಜ್ಯದಲ್ಲಿಯೂ ಯುವ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದರು.
ಇದೀಗ ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ತೆಲಂಗಾಣದ ಉಸ್ತುವಾರಿ ನಿರ್ವಹಿಸುತ್ತಿದ್ದಾರೆ. 2014ರಲ್ಲಿ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀನಿವಾಸ್ ನೇಮಕಗೊಂಡಿದ್ದರು.
ಇದಕ್ಕೂ ಮೊದಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಮೂಲತಃ ಶಿವಮೊಗ್ಗದ ಭದ್ರಾವತಿಯವರಾಗಿರುವ ಶ್ರೀನಿವಾಸ್ ಇದೀಗ ಬೆಂಗಳೂರಿನ ರಾಜಾಜಿನಗರದಲ್ಲಿ ನೆಲೆಸಿದ್ದಾರೆ. ಉತ್ತಮ ಕ್ರಿಕೆಟ್ ಪಟುವಾಗಿದ್ದು, ಅಂಡರ್ 19 ವಿಭಾಗದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.