ನವದೆಹಲಿ(ಸೆ.11): ಸಮಾಜದಲ್ಲಿ ಬ್ರಾಹ್ಮಣ ಯಾವಾಗಲೂ ಉಚ್ಚ ಸ್ಥಾನ ಹೊಂದಿದ್ದು, ತ್ಯಾಗ ಮತ್ತು ತಪಸ್ಸಿನಿಂದ ಬ್ರಾಹ್ಮಣ ಈ ಸ್ಥಾನ ಅಲಂಕರಿಸಿದ್ದಾನೆ ಎಂಬ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿಕೆ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ರಾಜಸ್ಥಾನದ ಕೋಟಾದಲ್ಲಿ ನಡೆದ ಬ್ರಾಹ್ಮಣ ಮಹಾಸಭಾ ಸಮಾವೇಶದಲ್ಲಿ ಮಾತನಾಡಿದ್ದ ಓಂ ಬಿರ್ಲಾ, ಸಮಾಜದಲ್ಲಿ ಬ್ರಾಹ್ಮಣರಿಗೆ ಇರುವ ಉಚ್ಚ ಸ್ಥಾನ ಮುಂದುವರೆಯಬೇಕು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು.
ಈ ಕುರಿತು ಟ್ವೀಟ್ ಮಾಡಿದ್ದ ಬಿರ್ಲಾ, ತ್ಯಾಗ ತಪಸ್ಸಿನಿಂದ ಪಡೆದ ಈ ಉಚ್ಚ ಸ್ಥಾನವನ್ನು ಬ್ರಾಹ್ಮಣ ಸಮುದಾಯ ಕಾಪಾಡಿಕೊಂಡು ಹೋಗಬೇಕಿದೆ ಎಂದು ಹೇಳಿದ್ದರು.
ಇನ್ನು ಬಿರ್ಲಾ ಹೇಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಬಿರ್ಲಾ ಹೇಳಿಕೆ ಜಾತಿ ವ್ಯವಸ್ಥೆಯ ಕ್ರೂರತೆ ಹಾಗೂ ಅದರ ಅಸಮಾನತೆಯ ಪ್ರತಿಬಿಂಬ ಎಂದು ಟೀಕಿಸಿದ್ದಾರೆ.
ಅಲ್ಲದೇ ನಾವೆಲ್ಲಾ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಎಂಬ ಕಾರಣಕ್ಕೆ ಗೌರವಿಸುತ್ತೇವೆಯೇ ಹೊರತು ಅವರು ಬ್ರಾಹ್ಮಣ ಎಂಬ ಕಾರಣಕ್ಕೆ ಅಲ್ಲ ಎಂದು ಸಿಬಲ್ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.