ರಾಹುಲ್’ಗಾಗಿ 1 ತಿಂಗಳು ವೇಸ್ಟ್: ಕರಣ್ ಸಿಂಗ್ @his best!

Published : Jul 08, 2019, 08:05 PM ISTUpdated : Jul 08, 2019, 08:10 PM IST
ರಾಹುಲ್’ಗಾಗಿ 1 ತಿಂಗಳು ವೇಸ್ಟ್: ಕರಣ್ ಸಿಂಗ್ @his best!

ಸಾರಾಂಶ

‘ರಾಹುಲ್ ರಾಜೀನಾಮೆಗಾಗಿ ಒಂದು ತಿಂಗಳು ವೇಸ್ಟ್ ಆಯ್ತು’| ಸ್ವಪಕ್ಷದ ವಿರುದ್ಧ ಹಿರಿಯ ಕಾಂಗ್ರೆಸ್ಸಿಗ ಕರಣ್ ಸಿಂಗ್ ಅಸಮಾಧಾನ| ಕೂಡಲೇ ನೂತನ ಅಧ್ಯಕ್ಷ  ಹಾಗೂ ನಾಲ್ವರು ಉಪಾಧ್ಯಕ್ಷರ ನೇಮಕಕ್ಕೆ ಕರಣ್ ಒತ್ತಾಯ| ಮನಮೋಹನ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಆಗ್ರಹ|

ನವದೆಹಲಿ(ಜು.08): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲು, ಕಾಂಗ್ರೆಸ್ ಒಂದು ತಿಂಗಳು ಕಾಲಹರಣ ಮಾಡಿತು ಎಂದು ಹಿರಿಯ ಕಾಂಗ್ರೆಸ್ಸಿಗ ಕರಣ್ ಸಿಂಗ್ ಹರಿಹಾಯ್ದಿದ್ದಾರೆ.
 
ಒಂದು ತಿಂಗಳ ಸಮಯ ಹಾಳು ಮಾಡುವ ಬದಲು ಕೂಡಲೇ ರಾಹುಲ್ ರಾಜೀನಾಮೆ ಅಂಗೀಕರಿಸಿ, ಪಕ್ಷಕ್ಕೆ ಮಧ್ಯಂತರ ಅಧ್ಯಕ್ಷರನ್ನು ನೇಮಿಸಬೇಕಿತ್ತು ಕರಣ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರಿ, ನೂತನ ಅಧ್ಯಕ್ಷ ಹಾಗೂ ನಾಲ್ವರು ಉಪಾಧ್ಯಕ್ಷರನ್ನು ನೇಮಿಸಬೇಕು ಎಂದು ಕರಣ್ ಸಿಂಗ್ ಆಗ್ರಹಿಸಿದ್ದಾರೆ.

ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಭಾಗಕ್ಕೆ ಒಬ್ಬೊಬ್ಬರಂತೆ ನಾಲ್ವರು ಉಪಾಧ್ಯಕ್ಷರನ್ನು ನೇಮಿಸಿ, ಕೇಂದ್ರದಲ್ಲಿ ಓರ್ವ ಅಧ್ಯಕ್ಷರನ್ನು ನೇಮಿಸುವುದು ಉತ್ತಮ ಎಂದು ಕರಣ್ ಸಿಂಗ್ ಸಲಹೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌