ಬಿಜೆಪಿ ಸಂಸದ ಅಂಗಡಿ ರಾಜೀನಾಮೆಗೆ ಆಗ್ರಹ : ಎದುರಾಯ್ತು ಆಕ್ರೋಶ

Published : Jun 19, 2019, 03:38 PM IST
ಬಿಜೆಪಿ ಸಂಸದ ಅಂಗಡಿ ರಾಜೀನಾಮೆಗೆ ಆಗ್ರಹ : ಎದುರಾಯ್ತು ಆಕ್ರೋಶ

ಸಾರಾಂಶ

ಬೆಳಗಾವಿ ಸಂಸದ ಸುರೇಶ್ ಅಂಗಡಿ ವಿರುದ್ಧ ಭಾರೀ ಆಕ್ರೋಶ ಎದುರಾಗಿದೆ. ಅಲ್ಲದೇ  ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಗಿದೆ.

ಬೆಳಗಾವಿ [ಜೂ.19]  : ಲೋಕಸಭೆಯಲ್ಲಿ ಪ್ರಮಾಣ ವಚನದ ವೇಳೆ  ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಸುರೇಶ್ ಅಂಗಡಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿರುದ್ದ  ನೂರಾರು ಕರವೆ ಕಾರ್ಯಕರ್ತರಿಂದ  ಅವರ ವಿರುದ್ಧ ಪ್ರತಿಭಟನೆ ನಡೆದಿದೆ. 

ಇನ್ನು ಪ್ರತಿಭಟನೆ ವೇಳೆ ಕನ್ನಡ ವಿರೋಧಿ ಸುರೇಶ್ ಅಂಗಡಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ ಬೆಳಗಾವಿಯಲ್ಲಿರುವ ಸುರೇಶ್ ಅಂಗಡಿ ಅವರ ಮನೆಗೂ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ತಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು