ರಾಜ್ಯಕ್ಕೂ ತಟ್ಟಿದ ಭೀಮಾ ಕೋರೆಗಾಂವ್ ಬಿಸಿ

Published : Jan 03, 2018, 10:15 AM ISTUpdated : Apr 11, 2018, 01:05 PM IST
ರಾಜ್ಯಕ್ಕೂ ತಟ್ಟಿದ ಭೀಮಾ ಕೋರೆಗಾಂವ್ ಬಿಸಿ

ಸಾರಾಂಶ

ಅಹಿತಕರ ಘಟನೆ ತಡೆಯಲು ಮುಂಜಾಗೃತ ಕ್ರಮವಾಗಿ ಚಿಕ್ಕೋಡಿ ವಾಯುವ್ಯ ವಿಭಾಗದ 220ಕ್ಕೂ ಹೆಚ್ಚು ಬಸ್'ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಿಕ್ಕೋಡಿಯಿಂದ ಪುಣೆ, ಮುಂಬೈ, ಸಾಂಗ್ಲಿ, ಮೀರಜ್'ಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.

ಚಿಕ್ಕೋಡಿ(ಜ.03): ಭೀಮಾ ಕೋರೆಗಾಂವ್ ಹಿಂಸಾಚಾರದ ಬಿಸಿ ರಾಜ್ಯಕ್ಕೂ ತಟ್ಟಿದ್ದು, ಮಹಾರಾಷ್ಟ್ರ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್'ಗಳ ಸಂಚಾರ ಸ್ಥಗಿತಗೊಂಡಿದೆ.

ಅಹಿತಕರ ಘಟನೆ ತಡೆಯಲು ಮುಂಜಾಗೃತ ಕ್ರಮವಾಗಿ ಚಿಕ್ಕೋಡಿ ವಾಯುವ್ಯ ವಿಭಾಗದ 220ಕ್ಕೂ ಹೆಚ್ಚು ಬಸ್'ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಿಕ್ಕೋಡಿಯಿಂದ ಪುಣೆ, ಮುಂಬೈ, ಸಾಂಗ್ಲಿ, ಮೀರಜ್'ಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.

ದಲಿತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್'ಗೆ ಕರೆ ನೀಡಲಾಗಿದೆ. ಭೀಮಾ ಕೋರೆಗಾಂವ್ ವೇಳೆ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿ ಮಹಾರಾಷ್ಟ್ರದಾದ್ಯಂತ ತೀವ್ರ ಪ್ರತಿಭಟನೆ ಮಾಡಲಾಗುತ್ತಿದೆ. ಇನ್ನೂ ಪ್ರಕರಣದ ಕುರಿತು ಸಿಐಡಿ ತನಿಖೆಯಾಗಬೇಕು ಎಂದು ಮಹಾ ಸಿಎಂ ದೇವೇಂದ್ರ ಫಡ್ನಾವೀಸ್ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂಡಿಗೆರೆ: ಮನೆ ಭೋಗ್ಯ ವಿಚಾರಕ್ಕೆ ಜಗಳ, ಮಹಿಳೆಯ ಜಡೆ ಹಿಡಿದು ಎಳೆದು ಬಿಸಾಡಿ ಹಲ್ಲೆ.!
Bengaluru: ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ, ಪತ್ನಿಯ ಗೋಳಾಟ ಕೇಳಿಯೂ ನೆರವಿಗೆ ಬಾರದ ಜನ!