
ಬೆಂಗಳೂರು(ಡಿ.05): ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾಗಿರೋ ಸುದ್ದಿ ಹೊರಬೀಳುತ್ತಿದಂತೆ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆ ತಿರುವಣ್ಣಾಮಲೈ ನಿಂದ ಬೆಂಗಳೂರಿಗೆ ಬರುತ್ತಿದ್ದ 2 ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸುತ್ತಿದಂತೆ ಬಸ್ ಸಂಚಾರವನ್ನೇ ಸ್ಥಗಿತಗೊಳಿಸಲಾಗಿದೆ.
ನಿನ್ನೆ ತಡರಾತ್ರಿ ಕೆ ಎಸ್ ಆರ್ ಟಿ ಸಿ ಯ ಬಸ್ ಗೆ ತಮಿಳುನಾಡಿನಲ್ಲಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಒಂದೆಡೆ ಕೆಎಸ್ಆರ್ಟಿಸಿ ಸಂಚಾರ ಸ್ಥಗಿತಗೊಳಿಸಿದ ಬೆನ್ನಲ್ಲೇ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಕೂಡ ಬಸ್ ಸಂಚಾರ ಸ್ಥಗಿತಗೊಳಿಸಿತು.. ಇದರಿಂದ ಜನ ಪರದಾಡುವಂತಾಗಿತ್ತು.
ಬೆಂಗಳೂರಿನ ಶಾಂತಿನಗರದಿಂದ ತಮಿಳುನಾಡಿಗೆ ತೆರಳಬೇಕಿದ್ದ ಬಸ್ಗಳು ತೆರಳಲು ಸಿದ್ಧವಾಗಿದ್ದರೂ, ನಿಲ್ಲಿಸುವ ಸೂಚನೆ ಬಂದ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿಯೇ ನಿಲ್ಲಿಸಲಾಗಿತ್ತು.. ನಗರದಿಂದ ೪೭೦ ಷಡ್ಯೂಲ್ನಲ್ಲಿ ಬಸ್ಗಳು ತಮಿಳುನಾಡಿಗೆ ನಿತ್ಯ ತೆರಳುತ್ತವೆ. ಇವೆಲ್ಲವನ್ನೂ ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿನಿಂದ ಕೂಡ ಇದೇ ಸಂಖ್ಯೆಯ ಬಸ್ಗಳ ಸೇವೆ ಇತ್ತು. ಅದನ್ನ ಸ್ಥಗಿತಗೊಳಿಸಲಾಗಿದೆ.. ಬೆಂಗಳೂರಿನಿಂದ ಪ್ರತಿ ಒಂದು ಗಂಟೆಗೆ ಒಂದು ವೋಲ್ವೊ ಬಸ್ ತೆರಳುತ್ತಿತ್ತು. ಅದನ್ನೂ ನಿಲ್ಲಿಸಲಾಗಿದ್ದು, ಪ್ರತಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದ್ದು, ಆಯಾ ಭಾಗದ ಮಾಹಿತಿ ಸಿಕ್ಕ ಮೇಲೆ, ಪರಿಸ್ಥಿತಿ ಆಧರಿಸಿ ಮುಂದಿನ ಸಂಚಾರ ನಿರ್ಧರಿಸಲಾಗುವುದು ಎಂದು ಕೆಎಸ್ಆರ್ಟಿಸಿ ಎಂಡಿ ರಾಜೆಂದರ್ ಕುಮಾರ ಕಟಾರಿಯಾ ತಿಳಿಸಿದ್ದಾರೆ.
ಸದ್ಯಕ್ಕೆ ಉಬಯ ರಾಜ್ಯಗಳ ಸಂಪರ್ಕ ಕಲ್ಪಿಸುತ್ತಿದ್ದ ಸಾರಿಗೆ ಬಂದ್ ಆಗಿದೆ. ಜನ ಪರದಾಡುವಂತಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೂ ಉಭಯ ರಾಜ್ಯಗಳ ಬಸ್ ಸಂಚಾರ ಸ್ಥಗಿತವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.