ಕಾವೇರಿ ಬಿಕ್ಕಟ್ಟು: ಕರ್ನಾಟಕದಿಂದ ಸುಪ್ರೀಂಕೋರ್ಟ್'ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

Published : Sep 26, 2016, 07:13 AM ISTUpdated : Apr 11, 2018, 12:57 PM IST
ಕಾವೇರಿ ಬಿಕ್ಕಟ್ಟು: ಕರ್ನಾಟಕದಿಂದ ಸುಪ್ರೀಂಕೋರ್ಟ್'ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

ಸಾರಾಂಶ

ನವದೆಹಲಿ(ಸೆ. 26): ನಿತ್ಯ 6 ಸಾವಿರ ಕ್ಯೂಸೆಕ್‌‌ ನೀರು ಬಿಡಲು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍'ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ. ಸೆ. 20ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಲು ಉಂಟಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್‍ಗೆ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಿದೆ. ಡಿಸೆಂಬರ್'ವರೆಗೆ ತನಗೆ ಯಾವುದೇ ಹೆಚ್ಚುವರಿ ನೀರನ್ನು ಬಿಡಲು ಸಾಧ್ಯವಾಗುವುದಿಲ್ಲವೆಂದು ರಾಜ್ಯವು ಅಸಹಾಯಕತೆ ತೋಡಿಕೊಂಡಿದೆ. ಜೊತೆಗೆ ಕಾವೇರಿ ಜಲಾನಯನ ಭಾಗದ ಕಬಿನಿ, ಹಾರಂಗಿ, ಕೆಆರ್‍'ಎಸ್ ಹಾಗೂ ಹೇಮಾವತಿ ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಕೈಗೊಂಡಿರುವ ನಿರ್ಣಯದ ಪ್ರತಿಯನ್ನೂ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದೆ. ಜೊತೆಗೆ ಕಾವೇರಿ ನಿರ್ವಹಣಾ ಮಂಡಳಿಯನ್ನು ಕೇಂದ್ರ ಸರ್ಕಾರ ರಚಿಸುವಂತೆ ನೀಡಿರುವ ಆದೇಶವನ್ನು ಕೂಡ ಮಾರ್ಪಾಡು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮನವಿ ಮಾಡಿದೆ.

ಸೆ.20ರಂದು ಸುಪ್ರೀಂಕೋರ್ಟ್ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಕರ್ನಾಟಕಕ್ಕೆ ಆದೇಶ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!