
ಬೆಂಗಳೂರು : ಬಿಜೆಪಿ ಇದೇ ಮೊದಲ ಬಾರಿಗೆ ಅಪ್ಪ ಮಕ್ಕಳಿಗೂ ಟಿಕೆಟ್ ನೀಡಿದೆ. ಗೋವಿಂದರಾಜ ನಗರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ವಿ. ಸೋಮಣ್ಣ ಪುತ್ರ ಡಾ.ಅರುಣ್ ಅವರಿಗೆ ಹಾಸನ ಜಿಲ್ಲೆ ಅರಸೀಕೆರೆ ಟಿಕೆಟ್ ನೀಡಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಿಂದ ಸ್ಪರ್ಧಿಸುತ್ತಿರುವ ಮಾಜಿ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ್ಗೆ ಅವಕಾಶ ಕಲ್ಪಿಸಲಾಗಿದೆ.
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಕೆಜಿಎಫ್ ಕ್ಷೇತ್ರದಿಂದ ಹಾಲಿ ಶಾಸಕಿ ರಾಮಕ್ಕ ಬದಲು ಪುತ್ರ ಹಾಗೂ ಮಾಜಿ ಶಾಸಕ ವೈ.ಸಂಪಂಗಿ ಅವರಿಗೆ ಘೋಷಿಸಲಾಗಿತ್ತು. ಆದರೆ, ಇದೀಗ ಮೂರನೇ ಪಟ್ಟಿಯಲ್ಲಿ ಸಂಪಂಗಿ ಬದಲು ಅವರ ಮಗಳು ಅಶ್ವಿನಿ ಅವರಿಗೆ ಟಿಕೆಟ್ ನೀಡಲಾಗಿದೆ. ಗೆಲ್ಲುವ ಮಾನದಂಡ ಆಧರಿಸಿ ಸಂಪಂಗಿ ಕೋರಿಕೆ ಮೇರೆಗೆ ಟಿಕೆಟ್ ಬದಲಾಯಿಸ ಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.