
ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ನಂತರವೇ ಪ್ರಕಟಿಸುವುದಾಗಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಓ.ಪಿ.ರಾವತ್ ಘೋಷಿಸಿದ್ದಾರೆ.
ಮಾರ್ಚ್’ನಲ್ಲೇ ಚುನಾವಣೆ ಘೋಷಣೆ ಆಗಬಹುದೆಂಬ ನಿರೀಕ್ಷಿಸಲಾಗಿತ್ತು. ಆದರೆ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಈ ಬಗ್ಗೆ ಹೇಳಿಕೆ ನೀಡಿದ್ದು, ಏಪ್ರಿಲ್ 15ರ ಆಸುಪಾಸಿನಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.
ಶಾಲಾ-ಕಾಲೇಜು ಪರೀಕ್ಷೆ ನಿಗದಿ ಹಿನ್ನೆಲೆಯಲ್ಲಿ ಏಪ್ರಿಲ್ 15ರ ನಂತರವೇ ರಾಜ್ಯ ವಿಧಾನಸಭೆಗೆ ಅಧಿಸೂಚನೆಯು ಪ್ರಕಟವಾಗಲಿದೆ. ಏಪ್ರಿಲ್ 15ರವರೆಗೂ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಅನ್ವಯವಾಗದಿರುವ ಹಿನ್ನೆಲೆಯಲ್ಲಿ, ಆವರೆಗೂ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿದಂತಾಗಿದೆ.
ಏಪ್ರಿಲ್ ನಲ್ಲಿ ರಾಜ್ಯಕ್ಕೆ ಆಯೋಗ:
ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮೂವರು ಆಯುಕ್ತರುಗಳು ಭೇಟಿ ನೀಡಲಿದ್ದಾರೆ. ಚುನಾವಣೆ ಸುಗಮವಾಗಿ ನಡೆಸಲು ಬೇಕಾದ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ.
ಮೇ 28ಕ್ಕೆ 14ನೇ ವಿಧಾನಸಭೆಯ ಅವಧಿಯು ಮುಕ್ತಾಯವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.