
ಬೆಂಗಳೂರು (ಜು.06): ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಲು ಸಿದ್ಧವಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಯಾರೂ ಊಹಿಸಲೂ ಸಾಧ್ಯವಾಗದ ಹಲವು ಘಟಾನುಘಟಿ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು, ಸ್ಪೀಕರ್ ಭೇಟಿಯಾಗಲು ಹೊರಟಿದ್ದಾರೆ.
ಅಮೆರಿಕಾ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ವಾಪಾಸಾಗುವಷ್ಟರಲ್ಲಿ ಸರ್ಕಾರ ಪತನವಾಗುವ ಎಲ್ಲಾ ಲಕ್ಷಣಗಳು ಕಾಣಿಸಿಕೊಂಡಿವೆ.
ಹಾಗಾದರೆ 13 ಮಂದಿ ಶಾಸಕರ ರಾಜೀನಾಮೆಯಿಂದ ಸದನದ ಬಲಾಬಲ ಏನಾಗಲಿದೆ? ಇಲ್ಲಿದೆ ವಿವರ:
ಸದನದ ಒಟ್ಟು ಬಲ: 224
ಬಿಜೆಪಿ: 105
ಕಾಂಗ್ರೆಸ್: 79
ಜೆಡಿಎಸ್ 38
ಪಕ್ಷೇತರ: 2
ಒಟ್ಟು ರಾಜೀನಾಮೆ ಸಂಖ್ಯೆ: 14
ಬಿಜೆಪಿ: 105
ಕಾಂಗ್ರೆಸ್: 79-12= 67
ಜೆಡಿಎಸ್: 38-2=36
ಪಕ್ಷೇತರರು: 2
ರಾಜೀನಾಮೆ ಬಳಿಕ ಸದನದ ಬಲ: 210
ಬಹುಮತ ಸಾಬೀತಿಗೆ ಮ್ಯಾಜಿಕ್ ನಂಬರ್: 106
ಹಾಗಾಗಿ ಸರ್ಕಾರ ರಚಿಸಲು ಬಿಜಪಿಗೆ 1 ಶಾಸಕರ ಕೊರತೆ ಎದುರಾಗಲಿದೆ. ಪಕ್ಷೇತರ ಶಾಸಕ ಅಥವಾ BSP ಶಾಸಕರೊಬ್ಬರು ಬೆಂಬಲ ಕೊಟ್ಟರೆ ಬಿಜೆಪಿ ಸುಲಭವಾಗಿ ಸರ್ಕಾರ ರಚಿಸುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.