
ಬೆಂಗಳೂರು[ಜು. 19] ಕರ್ನಾಟಕದ ರಾಜಕೀಯ ಗೊಂದಲಗಳು ಇಂದು ಕೊನೆಯಾಗಬಹುದು, ನಾಳೆ ಕೊನೆಯಾಗಬಹುದು ಎಂದುಕೊಳ್ಳುತ್ತಿರುವವರು ಇನ್ನು ಮೂರು ದಿನ ಕಾಯಬೇಕಾಗಿದೆ. ಶುಕ್ರವಾರದ ಕಲಾಪವೂ ಗೊಂದಲಗಳ ನಡುವೆಯೇ ಅಂತ್ಯವಾಗಿದೆ.
ಬೆಳಗ್ಗೆಯಿಂದಲೂ ಆರಂಭವಾದ ಚರ್ಚೆ ರಾತ್ರಿ 8.30ರವರೆಗೆ ನಡೆಯಿತು. ವಿರೋಧ ಪಕ್ಷ ಬಿಜೆಪಿಯವರು ತಾಳ್ಮೆಯಿಂದ ಕುಳಿತುಕೊಂಡಿದ್ದರೆ ಆಡಳಿತ ಪಕ್ಷದ ಶಾಸಕರು ಒಬ್ಬರಾದ ಮೇಲೆ ಒಬ್ಬರು ಸುದೀರ್ಘ ಭಾಷಣ ಮಾಡಿದರು.
ಕೇಂದ್ರಕ್ಕೆ ರಾಜ್ಯಪಾಲರ ವರದಿ, ರಾಷ್ಟ್ರಪತಿ ಆಳ್ವಿಕೆ ಜಾರಿ?
ಇತಿಹಾಸ, ತಾವು ಆಯ್ಕೆಯಾದ ಕ್ಷೇತ್ರ, ರಾಜ್ಯದ ಜನರು ಏನು ಅಂದುಕೊಳ್ಳುತ್ತಿದ್ದಾರೆ ಎಂಬೆಲ್ಲ ವಿಚಾರಗಳ ಮೇಲೆ ಒಬ್ಬರಾದ ಮೇಲೆ ಒಬ್ಬರು ಮ್ಯಾರಥಾನ್ ಭಾಷಣ ಮಾಡಿದರು. ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಮ್ಮೀ ಹೆಬ್ಬಾಳ್ಕರ್, ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಉದ್ದುದ್ದ ಭಾಷಣ ಮಾಡಿ ಅಭಿಪ್ರಾಯ ಹೊರಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.