
ಬೆಂಗಳೂರು[ಜು.31] ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬಂದ್ ಇದ್ಯಾ..? ಇಲ್ವಾ..? ಎಂಬುದನ್ನು ಬುಧವಾರ ನಿರ್ಧಾರ ಮಾಡಲಾಗುವುದು ಎಂದು ಹೋರಾಟ ಸಮಿತಿ ಗೌರವ ಅಧ್ಯಕ್ಷ ಬಸವರಾಜ್ ದಿಂಡೂರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ದಿಂಡೂರ, ಆಗಸ್ಟ್ 2ರ ಗುರುವಾರ ಉತ್ತರ ಕರ್ನಾಟಕ ಬಂದ್ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ. ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳೊಂದಿಗೆ ಸಭೆ ಸೇರಿ ನಿರ್ಧಾರಕ್ಕೆ ಬರುತ್ತೇವೆ ಎಂದರು.
ಉತ್ತರಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸದಿದ್ರೆ ಪ್ರತ್ಯೇಕ ರಾಜ್ಯ ಹೋರಾಟ ಖಂಡಿತ ಮುಂದುವರಿಯಲಿದೆ. 2022ರವರೆಗೂ ರಾಜ್ಯ ಸರ್ಕಾರಕ್ಕೆ ಗಡುವು ನೀಡುತ್ತೇವೆ. ತಾರತಮ್ಯ ಮಾಡುತ್ತಲೇ ಇದ್ದರೆ ಪ್ರತ್ಯೇಕ ರಾಜ್ಯ ಅನಿವಾರ್ಯ ಎಂದು ಹೇಳಿದರು.
"ಕಿತ್ತೂರು ಕರ್ನಾಟಕ" ಎಂದು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಚಿಂತನೆ ನಡೆದಿದೆ. ಹೈದರಾಬಾದ್-ಮುಂಬೈ ಪ್ರಾಂತ್ಯದ 14 ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಿಕೊಳ್ಳುತ್ತೇವೆ. ಚಿಕ್ಕೋಡಿಯನ್ನೂ ಜಿಲ್ಲೆಯಾಗಿ ಸೇರಿಸಿಕೊಂಡು ಒಟ್ಟು 14 ಜಿಲ್ಲೆಗಳ ರಾಜ್ಯ ನಿರ್ಮಾಣ ಮಾಡುತ್ತೇವೆ. ಸೋಮಶೇಖರ್ ಕೊತ್ತಂಬರಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಅಂತಿಮ ತಿರ್ಮಾನ ಮಾಡುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.