
ಬೆಂಗಳೂರು [ಜು.23] : ಡೆಡ್ ಲೈನ್ ಮೇಲೆ ಡೆಡ್ ಲೈನ್ ಕೊಡುತ್ತಿರುವ ವಿಶ್ವಾಸಮತದ ಬೃಹನ್ನಾಟಕ ಮುಗಿಯುವ ಲಕ್ಷಣಗಳು ಮಾತ್ರ ಗೋಚರಿಸುತ್ತಿಲ್ಲ. ಆದರೆ ಇಂದೇ ಕೊನೆಯ ದಿನ ಎನ್ನುವ ವಿಶ್ವಾಸದಲ್ಲಿ ಬಿಜೆಪಿ ಮುಖಂಡರಿದ್ದಾರೆ.
ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ಪಡೆಗಳು ಸರ್ಕಸ್ ಮಾಡುತ್ತಿದ್ದರೆ, ಬಿಜೆಪಿ ನಾಯಕರು ಹೊಸ ಮುಖ್ಯಮಂತ್ರಿ ಬಗ್ಗೆ ಚಿಂತನೆ ನಡೆಸಿದ್ದಾರೆ.
ಯಾವುದೇ ಸಂಶಯ ಇಲ್ಲದೇ ಇವತ್ತೇ ಎಲ್ಲಾ ಪ್ರಕ್ರಿಯೆಗಳು ಮುಗಿದು ಹೋಗಲಿವೆ. ಯಾರಿಗೆ ಬಹುಮತ, ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವುದು ಖಚಿತವಾಗಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
100 ಅಲ್ಲ 1000 ಪರ್ಸೆಂಟ್ ಇಂದೇ ಎಲ್ಲಾ ಡ್ರಾಮಾಗೂ ತೆರೆ ಬೀಳಲಿದೆ. ಸಿಎಂ ಇನ್ನೂ ಕಲಾಪಕ್ಕೆ ಹಾಜರಾಗಿಲ್ಲ. ಇದರ ಅರ್ಥ ಅವರು ಸೋತಿದ್ದಾರೆ ಎನ್ನುವುದೇ ಆಗಿದೆ.
ಫುಟ್ಬಾಲ್ ಆಟದಲ್ಲಿ ಕೀಪರ್ ಇಲ್ಲದಂತೆ ಆಗಿದೆ ಮೈತ್ರಿ ಪಾಳಯದ ಪರಿಸ್ಥಿತಿ. ಇದರಿಂದ ಬಿಜೆಪಿ ಪಾಳಯ ಫ್ರೀ ಆಗಿ ಗೋಲ್ ಹೊಡೆಯಲು ಅವಕಾಶವಿದೆ ಗೆಲ್ಲುವ ವಿಶ್ವಾಸದಲ್ಲಿ ಪದ್ಮನಾಭನಗರ ಶಾಸಕರೂ ಆಗಿರುವ ಬಿಜೆಪಿ ನಾಯಕ ಅಶೋಕ್ ಇದ್ದಾರೆ.
ಸದ್ಯ ಬಿಜೆಪಿ ಮುಖ್ಯಮಂತ್ರಿ ರೇಸ್ ನಲ್ಲಿ ಬಿ.ಎಸ್.ಯಡಿಯೂರಪ್ಪ ಇದ್ದು, ಆದರೆ ಅಶೋಕ್ ಹೇಳಿಕೆಯು ಸಿಎಂ ಹುದ್ದೆ ಆಕಾಂಕ್ಷಿಗಳ ಸಂಖ್ಯೆ ಬಿಜೆಪಿಯಲ್ಲಿದೆ ಎನ್ನುವ ಶಂಕೆಯೊಂದು ಸುಳಿಯುವಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.