
ಮುಂಬೈ (ಅ.12): ಮಹದಾಯಿ ವಿಚಾರದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ನಾಯಕರು ರಾಜ್ಯದ ಸಮಸ್ಯೆ ವಿವರಿಸಿದ್ದು ಮಧ್ಯಸ್ಥಿಕೆ ವಹಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಪಡ್ನವಿಸ್ ಮುಂದಾಗಿದ್ದಾರೆ.
ನಮ್ಮ ನೀರಿನ ಹಕ್ಕು ಅಗತ್ಯತೆ ಬಗ್ಗೆ ಫಡ್ನವಿಸ್ಗೆ ಬಿಜೆಪಿ ತಂಡ ಸ್ಪಷ್ಟನೆ ನೀಡಿದ್ದು ರಾಜ್ಯದ ಸಮಸ್ಯೆಯನ್ನು ವಿಸ್ತೃತವಾಗಿ ವಿವರಿಸಿದೆ. ವಿವರಣೆಯನ್ನು ಆಲಿಸಿದ ಫಡ್ನವೀಸ್ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಚರ್ಚೆ ನಡೆಸಿದ್ದಾರೆ.
ಅದೇ ರೀತಿ ಅತ್ತ ಮಹಾರಾಷ್ಟ್ರದ ಬೇಡಿಕೆ ಬಗ್ಗೆ ವಿವರ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೇಡಿಕೆಗಳು ಒಂದೇ ರೀತಿ ಇವೆ. ಎಲ್ಲರಿಗೂ ಸಮಾಧಾನವಾಗುವಂತೆ ಮಹದಾಯಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಫಡ್ನವೀಸ್ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.