
ಬೆಂಗಳೂರು[ಜು.13] : ರಾಜ್ಯ ರಾಜಕಾರಣದಲ್ಲಿ ಪ್ರಹಸನ ನಡೆಯುತ್ತಿರುವ ಬೆನ್ನಲ್ಲೇ ಇತ್ತ ಬಿಜೆಪಿ ರಿವರ್ಸ್ ಆಪರೇಷನ್ ತಡೆಯಲು ಮೆಗಾ ಪ್ಲಾನ್ ಮಾಡುತ್ತಿದೆ.
ತಮ್ಮ ಶಾಸಕರನ್ನು ಕಾಯ್ದುಕೊಳ್ಳ ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಹೊಸ ತಂತ್ರ ರೂಪಿಸುತ್ತಿದ್ದಾರೆ.
ಸದ್ಯ ಬಿಜೆಪಿ ಶಾಸಕರನ್ನು ರೆಸಾರ್ಟ್ ನಲ್ಲಿ ಇರಿಸಲಾಗಿದ್ದು, ಅಲ್ಲಿಯೇ ಪ್ಲಾನ್ ನಡೆಯುತ್ತಿದೆ. ಮೂರು ಮೂರು ಶಾಸಕರ ಜವಾಬ್ದಾರಿಯನ್ನು ಓರ್ವ ನಾಯಕರಿಗೆ ವಹಿಸಲಾಗುತ್ತಿದೆ.
ಎಂತಹ ಸಂದರ್ಭ ಎದುರಾದರೂ ಕೂಡ ಇವರನ್ನು ಕಾಯ್ದುಕೊಳ್ಳುವ ಜವಾಬ್ದಾರಿ ಅದೇ ನಾಯಕನ ಮೇಲೆ ಇರಲಿದೆ. ಒಂದೊಂದು ಬಾರಿ ಮೂವರನ್ನು ಕರೆದು ಬಿಎಸ್ ವೈ ಮಾತುಕತೆ ನಡೆಸುತ್ತಿದ್ದಾರೆ. ರಿವರ್ಸ್ ಆಪರೇಷನ್ ನಲ್ಲಿ ಕೇಳಿ ಬಂದ ಹೆಸರುಗಳ ಮೇಲೆ ಕಣ್ಣಿಡುವಂತೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.