
ಬೆಂಗಳೂರು[ಜು. 28] ಬಿಜೆಪಿ ಶಾಸಕಾಂಗ ಸಭೆ ಮುಗಿದಿದ್ದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿದ್ದಾರೆ.
ನಾಳೆ ಬಹುಮತ ಸಾಬೀತಾಯಿತು ಪಡಿಸುವ ಬಗ್ಗೆ ಚರ್ಚೆಯಾಗಿದೆ. ಬೆಳ್ಳಗ್ಗೆ 10.30 ಕ್ಕೆ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲ ಕಾಲ ಶಾಸಕರ ಜೊತೆ ಚರ್ಚೆ ಮಾಡಲಾಗತ್ತೆ. ಇದಾದ ನಂತರ 105 ಶಾಸಕರ ಒಟ್ಟಿಗೆ ವಿಧಾನಸಭೆ ಅಧಿವೇಶನಕ್ಕೆ ಹೋಗುತ್ತೇವೆ ಎಂದು ಜೇಳಿದರು.
BSY ವಿಶ್ವಾಸ ಗೆಲ್ತಾರಾ? ಇಲ್ಲಿದೆ ಅಂಕಿ ಅಂಶಗಳ ಫುಲ್ ಡಿಟೇಲ್ಸ್
ಧನವಿನಿಯೋಗ ಬಿಲ್ ಪಾಸ್ ಮಾಡುವುದರ ಬಗ್ಗೆ ಕೂಡ ಚರ್ಚೆ ಮಾಡಲಾಗಿದೆ. ಎಲ್ಲಾ ಪಕ್ಷಗಳನ್ನು ಧನ ವಿನಿಯೋಗ್ ಬಿಲ್ ಪಾಸ್ ಮಾಡಲಿಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಕೂಡ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ ಎಂದರು.
ಅತೃಪ್ತ ಶಾಸಕರನ್ನು ಅನರ್ಹತೆ ಮಾಡಿರುವ ಸ್ಪೀಕರ್ ನಿರ್ಧಾರ ವನ್ನು ಬಿಜೆಪಿ ಖಂಡಿಸುತ್ತದೆ. ಜೆಡಿಎಸ್ ಬಾಹ್ಯ ಬೆಂಬಲ ವಿಚಾರದ ದ್ರ ಬಗ್ಗೆ ನಾವು ಚರ್ಚೆ ಮಾಡಿಲ್ಲ. ಮೊದಲು ಜೆಡಿಎಸ್ ವರಿಷ್ಠರು ನಿರ್ಧಾರ ಮಾಡಲಿ ಎಂದು ರವಿಕುಮಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.