ಕುಮಾರಸ್ವಾಮಿ ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆಗೆ ಏನೇನು?

Published : Jul 05, 2018, 03:06 PM IST
ಕುಮಾರಸ್ವಾಮಿ ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆಗೆ ಏನೇನು?

ಸಾರಾಂಶ

ಸಿಎಂ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಯಾವ ಯಾವ ಜಿಲ್ಲೆಗಳಿಗೆ ಆದ್ಯತೆ ನೀಡಿದ್ದಾರೆ ನೋಡಿಕೊಂಡು ಬನ್ನಿ

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ'.

ಕಲುಬುರ್ಗಿಯಲ್ಲಿ ಸೌರ ವಿದ್ಯುತ್ ಉತ್ಪಾದನೆ ಉಪಕರಣ ತಯಾರಿಕೆ ಘಟಕ ನಿರ್ಮಾಣಕ್ಕೆ ಬಜೆಟ್ ಒಪ್ಪಿಗೆ ನೀಡಿದೆ. ಜತೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್​ಇಡಿ ಲೈಟ್ ಉತ್ಪಾದನಾ ಉದ್ಯಮ, ಸಿಎಂ ತವರು ಹಾಸನ ಜಿಲ್ಲೆಯಲ್ಲಿ ನೆಲಹಾಸು & ಸ್ಯಾನಿಟರಿ ಉತ್ಪಾದನಾ ಘಟಕ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಆಟಿಕೆ ತಯಾರಿಕಾ ಕ್ಲಸ್ಟರ್ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ ICB ಚಿಪ್ ತಯಾರಿಸುವ ಸಂಸ್ಥೆ ಸ್ಥಾಪನೆ , ಬಳ್ಳಾರಿ ಜಿಲ್ಲೆಯಲ್ಲಿ ವಸ್ತ್ರ ಉದ್ಯಮಕ್ಕೆ ಒತ್ತು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊಬೈಲ್ ಬಿಡಿ ಘಟಕಗಳ ಉದ್ಯಮ, ತುಮಕೂರು ಜಿಲ್ಲೆಯಲ್ಲಿ ಫಿಟ್​ನೆಸ್ ವಸ್ತು ಉದ್ಯಮ ಸ್ಥಾಪನೆ, ಬೀದರ್ ಜಿಲ್ಲೆಯಲ್ಲಿ ಕೃಷಿ ಉತ್ಪನ್ನ ಸಂರಕ್ಷಣೆ ಯಂತ್ರ ಉತ್ಪಾದನಾ ಘಟಕ ಆರಂಭಿಸಲಾಗುತ್ತದೆ.

9 ಜಿಲ್ಲೆಗಳಲ್ಲಿ ಹೊಸ ಉದ್ಯಮ ಸ್ಥಾಪನೆಗೆ 2 ಸಾವಿರ ಕೋಟಿ ಬಂಡವಾಳ ಹೂಡಿಕೆಗೂ ಬಜೆಟ್ ತೀರ್ಮಾನ ಮಾಡಿದೆ. ಜೈವಿಕವಾಗಿ ಪರ್ಯಾಯ ಪ್ಯಾಕಿಂಗ್ ಸಂಸ್ಥೆ ತೆರೆಯಲು 5 ಕೋಟಿ ರೂ. ಮೀಸಲಿಡಲಾಗಿದೆ.ಬೀದರ್ ನಲ್ಲಿ  ಕೃಷಿ ಉಪಕರಣಗಳ ತಯಾರಿಕೆಗಾಗಿ 2000 ಕೋಟಿ ರು ಬಂಡವಾಳ ಹೂಡಿಕೆ. ಮುಂಬರುವ ವರ್ಷಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ 14 ಸಾವಿರ ಕೋಟಿ ರು ಬಂಡವಾಳ ಹೂಡಿ  8 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು ಎಂದು ಕುಮಾರಸ್ವಾಮಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ
ಟ್ರಂಪ್‌ಗೆ ಸೆನೆಟರ್‌ಗಳ ರಿಕ್ವೆಸ್ಟ್: 'ಮೋದಿ ಜೊತೆ ಮಾತಾಡಿ ಸಾಹೇಬ್ರೇ, ನಮ್ಮ 'ಬೇಳೆ' ಬೇಯುತ್ತಿಲ್ಲ!