
ಬೆಂಗಳೂರು(ಫೆ.16): ರಾಜ್ಯ ಸರ್ಕಾರವು ಸರ್ಕಾರಿ ನೌಕರರ 6ನೇ ವೇತನ ಆಯೋಗವನ್ನು ಏಪ್ರಿಲ್ 1 ರಿಂದ ಜಾರಿಗೊಳಿಸಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ 5.93 ಲಕ್ಷ ನೌಕರರು ಹಾಗೂ 5.73 ಪಿಂಚಣಿದಾರರಿಗೆ ಅನುಕೂಲವಾಗುವ ಅವಧಿಯನ್ನು ಏಪ್ರಿಲ್ 30,2018ರವರೆಗೆ ವಿಸ್ತರಿಸಲಾಗಿದೆ. ಈ ಆಯೋಗದ ಜಾರಿಯಿಂದ ಸರ್ಕಾರಕ್ಕೆ 10,508 ಕೋಟಿ ರೂಗಳ ಹೊರೆ ಬೀಳಲಿದೆ.
ಕಳೆದ ವರ್ಷದ ಆಯವ್ಯಯದಲ್ಲಿ ಆಯೋಗ ರಚಿಸಲು ಶಿಫಾರಸ್ಸು ಮಾಡಿತ್ತು. ಶಿಫಾರಸ್ಸಿನ ವರದಿಯ ಆಧಾರದಂತೆ ನೌಕರರು ಹಾಗೂ ಪಿಂಚಣಿದಾರರು ಶೇ.30 ರಷ್ಟು ವೇತನ ಹೆಚ್ಚಳ ಪಡೆಯಲಿದ್ದಾರೆ' ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.