ಶಿವಮೊಗ್ಗ ಬಿಜೆಪಿ ಗೆಲುವಿಗೆ 6 ಕಾರಣ, ಕಾಂಗ್ರೆಸ್ ಕೊಡುಗೆಯೂ ಉಂಟು!

Published : Nov 06, 2018, 07:23 PM ISTUpdated : Nov 06, 2018, 07:35 PM IST
ಶಿವಮೊಗ್ಗ ಬಿಜೆಪಿ ಗೆಲುವಿಗೆ 6 ಕಾರಣ, ಕಾಂಗ್ರೆಸ್ ಕೊಡುಗೆಯೂ ಉಂಟು!

ಸಾರಾಂಶ

ಕುತೂಹಲ ಕೆರಳಿಸಿದ್ದ ಕರ್ನಾಟಕದ 3 ಲೋಕಸಭೆ ಮತ್ತು 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದರೆ, ಉಳಿದ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಾಜಿಸಿಎಂ ಮಕ್ಕಳ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿದ್ದ ಕ್ಷೇತ್ರ ಶಿವಮೊಗ್ಗದಲ್ಲಿ ಬಿಜೆಪಿ ಗೆದ್ದಿದೆ.

ಶಿವಮೊಗ್ಗ[ನ.06] ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ದೋಸ್ತಿ ಪಕ್ಷಗಳು ಒಟ್ಟಾಗೊ ಹೋರಾಟ ಮಾಡಿದರೂ ಬಿಜೆಪಿ ಹೇಗೆ ಜಯ ಸಾಧಿಸಿತು. ಬಿಜೆಪಿ ಗೆಲುವಿಗೆ ಕಾರಣಗಳು ಏನು? 

1. ಬಿಜೆಪಿ ಸಂಘಟಿತ ಹೋರಾಟ: ವಿಧಾನಸಭೆ ಚುನಾವಣೆ ವೇಳೆ ಒಟ್ಟಾಗಿ ಕೆಲಸ ಮಾಡಿದ್ದ ಯಡಿಯೂರಪ್ಪ ಮತ್ತು ಈಶ್ವರಪ್ಪ ಈ ಬಾರಿ ಸಹ ಜತೆಯಾಗಿ ಪ್ರಚಾರ ಕೈಗೊಂಡಿದ್ದರು.

2. ಪುತ್ರನ ಗೆಲುವಿಗೆ ಠಿಕಾಣಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಶಿವಮೊಗ್ಗವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದ ನಾಯಕ ಮಗನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಪ್ಪ-ಮಗ, ಅಪ್ಪ-ಮಗ, ಗಂಡ-ಹೆಂಡತಿ...ಸದ್ಯದ ಸ್ಥಿತಿ!

3.ಶಾಸಕರ ಬಲ: ಶಿವಮೊಗ್ಗ ವಿಧಾನಸಭಾ ಕ್ಷೇತ್ರಗಳಲ್ಲಿ ತೀರ್ಥಹಳ್ಳಿ, ಸಾಗರ, ಸೊರಬ ಮತ್ತು ಶಿವಮೊಗ್ಗ ನಗರ ಗ್ರಾಮಾಂತರಗಳನ್ನು ಬಿಜೆಪಿ ವಶ ಮಾಡಿಕೊಂಡು ಎಲ್ಲ ಶಾಸಕರ ಬೆಂಬಲವನ್ನು ಬಳಸಿಕೊಂಡಿತು.

4. ಬೈಂದೂರು ಲೀಡ್: ಸಾಂಪ್ರದಾಯಿಕವಾಗಿ ಬಿಜೆಪಿಗೆ ಲೀಡ್ ತಂದುಕೊಡುವ ಬೈಂದೂರು ಈ ಬಾರಿ ಸಹ 13 ಸಾವಿರಕ್ಕೂ ಅಧಿಕ ಮತಗಳನ್ನು ಕಮಲಕ್ಕೆ ನೀಡಿತು.

5. ಸಂಘಟನೆ ಕೊರತೆ: ಜೆಡಿಎಸ್ ಮತ್ತು ಕಾಂಗ್ರೆಸ್ ಗೆ ತಳಮಟ್ಟದ ಸಂಘಟನೆ ಕೊರತೆ ಇದ್ದದ್ದು ಬಹಳ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿತು.

6. ಅಂತಿಮ ಕ್ಷಣದ ಅಭ್ಯರ್ಥಿ: ದೋಸ್ತಿಗಳ ಪ್ರಕಾರ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಬೇಕಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಅಭ್ಯರ್ಥಿ ಸಿಗದೇ ವಿದೇಶದಲ್ಲಿದ್ದ ಮಧು ಬಂಗಾರಪ್ಪಗೆ ಟಿಕೆಟ್ ನೀಡಲಾಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು