
ಬಳ್ಳಾರಿ[ಅ.15] ಬಿಜೆಪಿ ಮುಖಂಡನೊಬ್ಬನ ಲೈಂಗಿಕ ಹಗರಣ ಬೆಳಕಿಗೆ ಬರುವ ಮೂಲಕ ಲೋಕಸಭಾ ಉಪಚುನಾವಣೆಯಲ್ಲಿ ಗುಂಗಲ್ಲಿರುವ ಬಳ್ಳಾರಿ ಬಿಜೆಪಿ ನಾಯಕರಿಗೆ ಮುಜುಗರ ಉಂಟಾಗಿದೆ. ಕಾನಹೊಸಳ್ಳಿ ಮೂಲದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಾನಮಡುಗು ತಿಪ್ಪೇಸ್ವಾಮಿ ಎನ್ನುವವರು ಕೆಲಸ ಕೊಡಿಸೋದಾಗಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ
ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ವಿವಿಧ ವಿದ್ಯಾಸಂಸ್ಥೆ ಹೊಂದಿರುವ ತಿಪ್ಪೇಸ್ವಾಮಿ ಈ ರೀತಿ ಹಲವು ಕೃತ್ಯ ಮಾಡಿದ್ದಾರೆಂದು ಯುವತಿ ಆರೋಪಿಸಿದ್ದಾಳೆ. ತಮ್ಮ ಐಟಿಐ ಕಾಲೇಜಿನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ತನ್ನ ಜೊತೆ ಸಹಕರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೆಲಸ ಸಿಗುತ್ತದೆ ಅನ್ನೋ ಕಾರಣಕ್ಕೆ ಯುವತಿ ಒಪ್ಪಿದ್ದಾಳೆ. ಆದ್ರೇ ಅತ್ತ ಕೆಲಸವನ್ನು ನೀಡದೇ, ಇತ್ತ ಲೈಂಗಿಕವಾಗಿ ಬಳಸಿಕೊಳ್ಳೊ ಮೂಲಕ ಅನ್ಯಾಯ ಮಾಡಿದ್ದಾರೆಂದು ಯುವತಿ ಆರೋಪಿಸಿದ್ದಾಳೆ.
ಆರೋಪಿ ಶಾಸಕ ಎನ್.ವೈ. ಗೋಪಾಲ ಕೃಷ್ಣ ಬೆಂಬಲಿಗರಾಗಿದ್ದು ಇದೀಗ ಬಿಜೆಪಿಗೆ ಇರಿಸು ಮುರಿಸು ಉಂಟಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.