ಐದೂ ಕ್ಷೇತ್ರದಲ್ಲಿ ನಮ್ಮದೇ ಗೆಲುವು

Published : Oct 21, 2018, 12:28 PM ISTUpdated : Oct 21, 2018, 01:04 PM IST
ಐದೂ ಕ್ಷೇತ್ರದಲ್ಲಿ ನಮ್ಮದೇ ಗೆಲುವು

ಸಾರಾಂಶ

ಹಳೆಯದೆಲ್ಲವನ್ನೂ ಮರೆತು ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸಲು ಮುಂದಾಗಿದ್ದೇವೆ. ಐದು ಕ್ಷೇತ್ರ ಗೆಲ್ಲುವ ಮೂಲಕ ದೇಶಕ್ಕೆ ಸ್ಪಷ್ಟ ಸಂದೇಶ ರವಾನಿಸುತ್ತೇವೆ ಎಂದು ಕಾಂಗ್ರೆಸ್ - ಜೆಡಿಎಸ್ ನಾಯಕರು ಭರವಸೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು :  ಐದು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು, ಅಗತ್ಯಬಿದ್ದರೆ ಜಂಟಿ ಪ್ರಚಾರ ನಡೆಸಲು ನಿರ್ಧರಿಸುವ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

ಹನ್ನೆರಡು ವರ್ಷದ ಬಳಿಕ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿ, ಉಪ ಚುನಾವಣೆಯಲ್ಲಿ ಐದೂ ಕ್ಷೇತ್ರಗಳನ್ನೂ ಗೆಲ್ಲುತ್ತೇವೆ. ಈ ಮೂಲಕ ಜಾತ್ಯತೀತ ಶಕ್ತಿಗಳು ಒಗ್ಗೂಡಿದರೆ ಕೋಮುವಾದಿ ಪಕ್ಷ ಕೊಚ್ಚಿ ಹೋಗುತ್ತದೆ ಎಂಬ ಸಂದೇಶವನ್ನು ಇಡೀ ದೇಶಕ್ಕೆ ರವಾನಿಸುತ್ತೇವೆ ಎಂದು ಗುಡುಗಿದರು. 

ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು, ಹನ್ನೆರಡು ವರ್ಷಗಳ ಬಳಿ ತಾವು ಸಿದ್ದರಾಮಯ್ಯ ಒಂದೇ ವೇದಿಕೆ ಯಲ್ಲಿದ್ದೇವೆ. ಹಳೆಯದೆಲ್ಲವನ್ನೂ ಮರೆತು ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸಲು ಮುಂದಾಗಿದ್ದೇವೆ. ಐದು ಕ್ಷೇತ್ರ ಗೆಲ್ಲುವ ಮೂಲಕ ದೇಶಕ್ಕೆ ಸ್ಪಷ್ಟ ಸಂದೇಶ ರವಾನಿಸುತ್ತೇವೆ ಎಂದು ಹೇಳಿದರು.

ಉಪ ಚುನಾವಣೆ ಹಾಗೂ ಮುಂದಿನ ಲೋಕಸಭೆ ಯನ್ನು ಎರಡೂ ಪಕ್ಷ ಒಟ್ಟಾಗಿ ಎದುರಿಸುತ್ತೇವೆ. ಜತೆಗೆ ಅಗತ್ಯವಾದರೆ ಜಂಟಿಯಾಗಿ ಪ್ರಚಾರ ಕಾರ್ಯವನ್ನು ನಡೆಸುತ್ತೇವೆ. ಹಿಂದೆ ಪರಸ್ಪರ ಹೋರಾಟ ಮಾಡಿದ್ದೇವೆ, ಚುನಾವಣೆಯಲ್ಲಿ ಸೆಣಸಾಡಿದ್ದೇವೆ. ಇದೀಗ ಎಲ್ಲವನ್ನೂ ಮರೆತು ಒಟ್ಟಾಗಿ ಹೋಗಬೇಕಿದೆ. ಈ ಹಿಂದೆ ಏನೇನು ತಪ್ಪು ಮಾಡಿದ್ದರೆ ಎಲ್ಲದಕ್ಕೂ ಕ್ಷಮೆ ಯಾಚಿಸುತ್ತೇನೆ. ನನ್ನ ಹಿರಿತನಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ನಿಶ್ಚಯಿಸಿದ್ದೇನೆ ಎಂದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ