
ಬೆಂಗಳೂರು[ಸೆ. 26] ಅನರ್ಹರ ಕ್ಷೇತ್ರದಲ್ಲಿ ಘೋಷಣೆಯಾಗಿದ್ದ ಚುನಾವಣೆಗೆ ಸುಪ್ರೀಂ ಕೋರ್ಟ್ ಸದ್ಯಕ್ಕೆ ತಡೆ ನೀಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅನರ್ಹ ಶಾಸಕರು ನಮಗೆ ಜಯ ಸಿಕ್ಕಿದೆ, ನ್ಯಾಯ ಸಿಕ್ಕಿದೆ ಎಂದು ಬಣ್ಣಿಸಿದ್ದಾರೆ. ಆದರೆ ಒಂದೊಂದೆ ಅಂಶಗಳನ್ನು ವಿಶ್ಲೇಷಣೆ ಮಾಡಿದರೆ ಅನರ್ಹರಿಗೆ ಲಾಭಕ್ಕಿಂತ ನಷ್ಟವೇ ಜಾಸ್ತಿ! ಹೇಗೆ ಅಂತೀರಾ?
ನಾವು ಅನರ್ಹರು ಹೌದೋ.. ಅಲ್ಲವೋ ಮೊದಲು ತೀರ್ಮಾನ ನೀಡಬೇಕು... ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡಬೇಕು ಎನ್ನುವುದು ಅನರ್ಹ ಶಾಸಕರ ಪ್ರಮುಖ ವಾದವಾಗಿತ್ತು. ಆದರೆ ಇದೆರಡನ್ನೂ ಮೀರಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಸುಪ್ರೀಂ ಆದೇಶ: ಮುನಿರತ್ನ ಮುಗುಳ್ನಗೆಯ ಪ್ರತಿಕ್ರಿಯೆ! ...
ಅನರ್ಹತೆ ವಿಚಾರ ಕ್ಲೀಯರ್ ಆಗಿದ್ದರೆ ಮಾತ್ರ ಆ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡಬಹುದಿತ್ತು. ಆದರೆ ಚುನಾವಣೆಗಷ್ಟೆ ಬ್ರೇಕ್ ಬಿದ್ದಿದೆ. ಅನರ್ಹತೆ ವಿಚಾರದಲ್ಲಿ ಯಾವುದೇ ತೀರ್ಪು ಬಂದಿಲ್ಲ. ಹಾಗಾಗಿ ಚುನಾವಣೆಗೆ ಸ್ಪರ್ದಿಸುವ ಅವಕಾಶದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ದೋಸ್ತಿ ಸರ್ಕಾರ ಬಿದ್ದುಹೋಗಿ ಬಿಜೆಪಿ ಸರ್ಕಾರ ಬಂದ ಕೆಲವೇ ದಿನದಲ್ಲಿ ನಾವು ಸಚಿವರಾಗುತ್ತೇವೆ ಎಂದುಕೊಂಡಿದ್ದವರ ಆಸೆಗೂ ತಣ್ಣೀರು ಎರಚಿದಂತಾಗಿದೆ. ಸದ್ಯಕ್ಕೆ ಸಚಿವರಾಗು ಕನಸು ಕನಸಾಗಿಯೇ ಉಳಿಯಲಿದೆ. ಇನ್ನೊಂದು ಕಡೆ ಬಿಜೆಪಿ ಸರ್ಕಾರದ ಸಂಪುಟದ ಸ್ಥಾನಗಳು ಹಾಗೆ ಖಾಲಿ ಉಳಿಯುತ್ತವೋ ಅದಕ್ಕೂ ಉತ್ತರ ಇಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.