
ಬೆಂಗಳೂರು[ಜೂ.05]: ನಾಳೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ನೂತನ ಸಚಿವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಮೊದಲು ನಿಗದಿಯಾಗಿದ್ದ ಮಧ್ಯಾಹ್ನ 2 ಗಂಟೆ ಬದಲಾಗಿ ಎರಡು ಗಂಟೆ 12 ನಿಮಿಷಕ್ಕೆ ಪ್ರಮಾಣ ವಚನ ನೆರವೇರಲಿದೆ.
ಜೋತಿಷಿಗಳ ಸಲಹೆ ಮೇರೆಗೆ ಎಚ್.ಡಿ ರೇವಣ್ಣ ಸಮಯ ಬದಲಿಸಲು ಪಟ್ಟು ಹಿಡಿದಿದ್ದ ಹಿನ್ನಲೆಯಲ್ಲಿ ಸಚಿವರ ಪ್ರಮಾಣವಚನ ನಾಳೆ ಮಧ್ಯಾಹ್ನ ಎರಡು ಗಂಟೆಯ ಬದಲಾಗಿ 2.12ಕ್ಕೆ ನಿಗದಿಯಾಗಿದೆ ಎನ್ನಲಾಗಿದೆ. ಜೋತಿಷಿಗಳೊಂದಿಗೆ ಚರ್ಚಿಸಿ ಎಚ್.ಡಿ ರೇವಣ್ಣ ಸಮಯ ಬದಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸುಮಾರು 2 ವಾರಗಳ ಕಾಲ ನಡೆದ ಸಚಿವ ಸಂಪುಟ ಬಿಕ್ಕಟ್ಟು ಕೊನೆಗೂ ಬಗೆಹರಿದಂತಾಗಿದ್ದು, ನಾಳೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಯಾರಿಗೆ ಯಾವ ಖಾತೆ ಎನ್ನುವ ಕುತೂಹಲಕ್ಕೆ ಇನ್ನೂ ತೆರೆಬಿದ್ದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.