ಆಶಾ ಕಾರ್ಯಕರ್ತೆಯರಿಗೆ ದಸರಾ ಗಿಫ್ಟ್ ಕೊಟ್ಟ ಯಡಿಯೂರಪ್ಪ ಸರ್ಕಾರ

Published : Oct 03, 2019, 04:17 PM IST
ಆಶಾ ಕಾರ್ಯಕರ್ತೆಯರಿಗೆ ದಸರಾ ಗಿಫ್ಟ್ ಕೊಟ್ಟ ಯಡಿಯೂರಪ್ಪ ಸರ್ಕಾರ

ಸಾರಾಂಶ

ಆಶಾ ಕಾರ್ಯಕರ್ತೆಯರಿಗೆ ದಸರಾ ಗಿಫ್ಟ್ ಕೊಟ್ಟ ಯಡಿಯೂರಪ್ಪ ಸರ್ಕಾರ| ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ| ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.

ಬೆಂಗಳೂರು, (ಅ.03): ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ಕೊಡುವ ನಿಶ್ಚಿತ ಗೌರವಧನವನ್ನು 500 ರೂ. ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು (ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2019ರ ನ.1ರಿಂದ ಅನ್ವಯವಾಗುವಂತೆ ಗೌರವಧನ ಹೆಚ್ಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2ನೇ ದಿನಕ್ಕೆ 'ಆಶಾ' ಮುಷ್ಕರ; ಕುಸಿದು ಬಿದ್ದಳು ಒಬ್ಬ ಮಹಿಳೆ; ಮಳೆ ಚಳಿಯಲ್ಲೇ ರಾತ್ರಿ ಕಳೆದ 25 ಸಾವಿರ ಕಾರ್ಯಕರ್ತೆಯರು

ಮಹಾತ್ಮಾ ಗಾಂಧಿ ಅವರ 150ನೇ ಜಯಂತಿ ನಿಮಿತ್ತ 20 ಶಿಕ್ಷಾಬಂಧಿಗಳಿಗೆ ವಿಶೇಷ ಮಾಫಿಯೊಂದಿಗೆ 2 ಮತ್ತು 3ನೇ ಹಂತದಲ್ಲಿ ಬಿಡುಗಡೆ ಮಾಡುವ ನಿರ್ಧಾರವನ್ನೂ ಸಚಿವ ಸಂಪುಟ ಸಭೆ ಅನುಮೋದಿಸಿದೆ.

ಮಾಸಿಕ 12 ಸಾವಿರ ರೂ. ಗೌರವ ಧನ ನೀಡಬೇಕು, ಆರ್‌ಸಿಎಚ್‌ ಪೋರ್ಟಲ್‌ಗೆ ಆಶಾ ವೇತನ ಜಮೆ ರದ್ದುಗೊಳಿಸಬೇಕು ಎಂದು  ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ