
ಬೆಂಗಳೂರು[ಆ.20]: ಬಿ. ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ತಿಂಗಳ ಬಳಿಕ ಕೊನೆಗೂ ಸಂಪುಟ ವಿಸ್ತರಣೆಯಾಗಿದೆ. 17 ಮಂದಿ ಶಾಸಕರು ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಳೆದು, ತೂಗಿ ಸಿದ್ಧಪಡಿಸಿರುವ ಈ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳು ಕಂಡು ಬಂದಿವೆ. ಕೊನೆಯ ಕ್ಷಣದವರೆಗೆ ಸಚಿವರು ಯಾರಾಗ್ತಾರೆ? ಎಂಬುವುದಕ್ಕೆ ಉತ್ತರ ಬಹಳಷ್ಟು ರಹಸ್ಯವಾಗಿತ್ತು. ಆದರೀಗ ಈ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದ್ದು, ಸಚಿವರು ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕರ್ನಾಟಕ ಸಚಿವ ಸಂಪುಟಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
*ಗೋವಿಂದ ಕಾರಜೋಳ - ಮುಧೋಳ - ದಲಿತ ಎಡ
*ಡಾ.ಸಿ.ಎನ್.ಅಶ್ವತ್ಥ್ ನಾರಾಯಣ - ಮಲ್ಲೇಶ್ವರಂ - ಒಕ್ಕಲಿಗ
*ಲಕ್ಷ್ಮಣ್ ಸವದಿ - ಲಿಂಗಾಯತ
*ಕೆ.ಎಸ್.ಈಶ್ವರಪ್ಪ - ಶಿವಮೊಗ್ಗ ನಗರ - ಕುರುಬ
*ಆರ್.ಅಶೋಕ್ - ಪದ್ಮನಾಭನಗರ - ಒಕ್ಕಲಿಗ
*ಜಗದೀಶ್ ಶೆಟ್ಟರ್ - ಹುಬ್ಬಳ್ಳಿ-ಧಾರವಾಡ ಕೇಂದ್ರ - ಲಿಂಗಾಯತ
*ಬಿ.ಶ್ರೀರಾಮುಲು - ಮೊಳಕಾಲ್ಮೂರು - ವಾಲ್ಮೀಕಿ
*ಎಸ್.ಸುರೇಶ್ ಕುಮಾರ್ - ರಾಜಾಜಿನಗರ - ಬ್ರಾಹ್ಮಣ
*ವಿ.ಸೋಮಣ್ಣ - ಗೋವಿಂದರಾಜನಗರ - ಲಿಂಗಾಯತ
*ಸಿ.ಟಿ.ರವಿ - ಚಿಕ್ಕಮಗಳೂರು - ಒಕ್ಕಲಿಗ
*ಬಸವರಾಜ್ ಬೊಮ್ಮಾಯಿ - ಶಿಗ್ಗಾಂವಿ - ಲಿಂಗಾಯತ
*ಕೋಟ ಶ್ರೀನಿವಾಸ್ ಪೂಜಾರಿ - ಎಂಎಲ್ ಸಿ - ಈಡಿಗ
*ಜೆ.ಸಿ.ಮಾಧುಸ್ವಾಮಿ - ಚಿಕ್ಕನಾಯಕನಹಳ್ಳಿ - ಲಿಂಗಾಯತ
*ಸಿ.ಸಿ.ಪಾಟೀಲ್ - ನರಗುಂದ - ಲಿಂಗಾಯತ
*ಎಚ್.ನಾಗೇಶ್ - ಮುಳಬಾಗಿಲು - ದಲಿತ ಎಡ
*ಪ್ರಭು ಚೌಹಾಣ್ - ಔರಾದ್ - ಲಂಬಾಣಿ
*ಶಶಿಕಲಾ ಜೊಲ್ಲೆ - ನಿಪ್ಪಾಣಿ - ಪಂಚಮಸಾಲಿ ಲಿಂಗಾಯತ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.