ರಾಜ್ಯ ಸಚಿವ ಸಂಪುಟ ಸೇರುವರ್ಯಾರು? ಇಲ್ಲಿದೆ ಸಂಭವನೀಯರ ಪಟ್ಟಿ

Published : Oct 01, 2018, 06:21 PM IST
ರಾಜ್ಯ ಸಚಿವ ಸಂಪುಟ ಸೇರುವರ್ಯಾರು? ಇಲ್ಲಿದೆ ಸಂಭವನೀಯರ ಪಟ್ಟಿ

ಸಾರಾಂಶ

ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಆದರೆ, ಸಚಿವ ಸಂಪುಟ ಸೇರುವ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆದಿದೆ. ಹಾಗಾಗಿ ಯಾರಿಗೆ ಸಿಗುತ್ತೋ ಯಾರಿಗಿಲ್ಲೋ ಎನ್ನುವ ಕುತೂಹಲ ಮೂಡಿಸಿದೆ. ನಮಗೆ ಸಿಕ್ಕ ಪ್ರಾಥಮಿಕ ವರದಿಗಳ ಪ್ರಕಾರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯರ ಪಟ್ಟಿ ಈ ಕೆಳಗಿನಂತಿದೆ.

ಬೆಂಗಳೂರು, (ಅ.1): ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ವಿಧಾನ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಸಂಪುಟ ವಿಸ್ತರಣೆಯಾಗೋದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಖಚಿತಪಡಿಸಿದ್ದು, ಇದೇ ಅಕ್ಟೋಬರ್ 10 ಅಥವಾ 12ರಂದು ಒಂದೇ ಹಂತದಲ್ಲಿ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೊನೆಗೂ ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ನಲ್ಲಿ 6 ಹಾಗೂ ಜೆಡಿಎಸ್ 1 ಒಟ್ಟು 7 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ. ಆದರೆ, ಸಚಿವ ಸಂಪುಟ ಸೇರುವ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆದಿದೆ. ಹಾಗಾಗಿ ಯಾರಿಗೆ ಸಿಗುತ್ತೋ ಯಾರಿಗಿಲ್ಲೋ ಎನ್ನುವ ಕುತೂಹಲ ಮೂಡಿಸಿದೆ.

ನಮಗೆ ಸಿಕ್ಕ ಪ್ರಾಥಮಿಕ ವರದಿಗಳ ಪ್ರಕಾರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯರ ಪಟ್ಟಿ ಈ ಕೆಳಗಿನಂತಿದೆ.

* ರಾಮಲಿಂಗಾರೆಡ್ಡಿ- ಬಿಟಿಎಂ ಲೇಔಟ್ ಶಾಸಕ

* ಎಂ.ಟಿ.ಬಿ.ನಾಗರಾಜ್ - ಹೊಸಕೋಟೆ ಶಾಸಕ

* ಅಮರೇಗೌಡ ಭಯ್ಯಾಪುರ - ಕುಷ್ಠಗಿ ಶಾಸಕ

* ನಾಗೇಂದ್ರ - ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ

* ಆನಂದ ಸಿಂಗ್ - ಹೊಸಪೇಟೆ- ವಿಜಯನಗರ ಶಾಸಕ

* ಎಂ.ಬಿ.ಪಾಟೀಲ್ - ಬಬಲೇಶ್ವರ್ ಶಾಸಕ

* ಡಾ. ಸುಧಾಕರ್ - ಚಿಕ್ಕಬಳ್ಳಾಪುರ ಶಾಸಕ

* ನಾಗೇಶ್ - ಪಕ್ಷೇತರ ಶಾಸಕ

* ಶಿವರಾಮ್ ಹೆಬ್ಬಾರ್ - ಯಲ್ಲಾಪುರ ಶಾಸಕ

* ಬಿ.ಕೆ ಸಂಗಮೇಶ್ವರ್ - ಭದ್ರಾವತಿ ಶಾಸಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ