
ಬೆಂಗಳೂರು,(ಅ.05): ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಸೆ ಇಟ್ಟುಕೊಂಡು ಕಾಯುತ್ತಿರುವ ಅತೃಪ್ತ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.
ಸಂಪುಟ ವಿಸ್ತರಣೆಯನ್ನು ಮುಂದೂಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ರಾಮನಗರ ಹಾಗೂ ಜಮಖಂಡಿ ಉಪಚುನಾವಣೆ ನೆಪವೊಡ್ಡಿ ಸಂಪುಟ ವಿಸ್ತರಣೆ ಮುಂದೂಡುವ ಸಾಧ್ಯತೆ ಇದೆ.
ರಾಜ್ಯ ಸಚಿವ ಸಂಪುಟ ಸೇರುವರ್ಯಾರು? ಇಲ್ಲಿದೆ ಸಂಭವನೀಯರ ಪಟ್ಟಿ
ಇಷ್ಟೇ ಅಲ್ಲದೇ ಉಪಚುನಾವಣೆ ಮುಗಿಯುವುದರೊಳಗೆ ಬೆಳಗಾವಿ ಅಧಿವೇಶನ ಎದುರಾಗಲಿದೆ. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಿದರೆ ಅಸಮಾಧಾನಿತರು ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಸಾಧ್ಯತೆಗಳಿವೆ ಎಂದು ನಾಯಕರು ಅರಿತುಕೊಂಡಿದ್ದಾರೆ.
ಹೀಗಾಗಿ ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಮುಂದೂಡುವ ಎಲ್ಲಾ ಸಾಧ್ಯತೆಗಳಿವೆ. ಇದ್ರಿಂದ ಸಚಿವ ಸ್ಥಾನಕ್ಕೆ ಜಾತಕ ಪಕ್ಷಿಗಳಂತೆ ಕಾದು ಕುಳಿತ್ತಿದ್ದವರಿಗೆ ಭಾರೀ ನಿರಾಸೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.