
ಬಳ್ಳಾರಿ(ಆ. 02) ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈ ಕಮಾಂಡ್ ಶೀಘ್ರ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡುವುದಿಲ್ಲ. ಹೈ ಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ನಾನು ಬದ್ಧ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಸಚಿವ ಸ್ಥಾನ ಯಾವ ಜಿಲ್ಲೆ ಎಂದು ಅಂದುಕೊಂಡಿಲ್ಲ. ನಾನು ಇಡೀ ರಾಜ್ಯಕ್ಕೆ ಸೀಮಿತವಾದವನು. ನನ್ನಂತಹ ನಾಯಕರು ಬಹಳ ಜನರಿದ್ದಾರೆ ಎಂದರು.
ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್
ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟ ಶಾಸಕರಿಗೂ ಮಂತ್ರಿ ಸ್ಥಾನ ಕೊಡಬೇಕಾಗುತ್ತದೆ. ಅವರು ನಮಗೆ ಸಹಾಯ ಮಾಡುತ್ತಾರೆ. ಉಪ ಚುನಾವಣೆ ಆಗುವ 17 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ರಿಸೈನ್ ಮಾಡಿದ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ನೀಡುವ ವಿಚಾರ ಹೈಕಮಾಂಡಿಗೆ ಬಿಟ್ಟಿದ್ದು ಎನ್ನುತ್ತಾ ಅನರ್ಹ ಶಾಸಕರ ಹೆಜ್ಜೆ ಬಿಜೆಪಿ ಕಡೆಗೆ ಇದೆ ಎಂಬುದನ್ನು ರಾಮುಲು ಪರೋಕ್ಷವಾಗಿ ಒಪ್ಪಿಕೊಂಡರು.
ಭಾಗದಲ್ಲಿ ಅರ್ಧ ಡಜನ್ ಗೂ ಹೆಚ್ಚು ಸಚಿವಾಕಾಂಕ್ಷಿಗಳಿದ್ದು, ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಹಿರಿಯೂರು ಶಾಸಕಿ ಕೆ.ಪೂರ್ಣಿಮಾ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಹೊಳಲ್ಕೆರೆ ಶಾಸಕ ಚಂದ್ರಪ್ಪ ಸೇರಿದಂತೆ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೆಸರುಗಳು ಆಕಾಂಕ್ಷಿಗಳ ಪಟ್ಟಿಯಲ್ಲಿದೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ದಿಸಿ ಮೊಳಕಾಲ್ಮೂರಿನಲ್ಲಿ ಗೆಲುವು ಸಾಧಿಸಿದ ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಪಟ್ಟ ದೊರಕಲಿದೆ ಎನ್ನುವ ಮಾತುಗಳನ್ನು ಹಿಂದಿನಿಂದಲೂ ಕೇಳಿಬಂದಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.