ಸಭೆ ನೀಡಿದ ಸಾಕ್ಷ್ಯ, ಶುಕ್ರವಾರವೇ ಮೊದಲ ಹಂತದ ಸಚಿವ ಸಂಪುಟ ಪ್ರಮಾಣ?

Published : Aug 07, 2019, 05:15 PM ISTUpdated : Aug 07, 2019, 05:17 PM IST
ಸಭೆ ನೀಡಿದ ಸಾಕ್ಷ್ಯ, ಶುಕ್ರವಾರವೇ ಮೊದಲ ಹಂತದ ಸಚಿವ ಸಂಪುಟ ಪ್ರಮಾಣ?

ಸಾರಾಂಶ

ದೆಹಲಿಗೆ ಹೋಗಿದ್ದ ಸಿಎಂ ಯಡಿಯೂರಪ್ಪ ಖಾಲಿ ಕೈನಲ್ಲಿ ಹಿಂದಕ್ಕೆ ಬಂದಿದ್ದಾರೆ ಎಂದೇ ಭಾವಿಸಲಾಗಿತ್ತು. ಸಚಿವ ಸಂಪುಟ ವಿಸ್ತರಣೆ ಇನ್ನು ಹದಿನೈದು ದಿನ ಮುಂದಕ್ಕೆ ಹೋಗಬಹುದು ಎಂದು ಅಂದುಕೊಂಡಿದ್ದವರಿಗೆ ಹೊಸದೊಂದು ಸುದ್ದಿ ಸಿಕ್ಕಿದೆ.

ಬೆಂಗಳೂರು(ಆ. 07)  ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಯಿಂದ ಹಿಂದಿರುಗಿದ್ದು ದೆಹಲಿ ನಾಯರಿಂದ ಯಾವುದೇ ಸಂದೇಶ ಹೊತ್ತು ಬಂದಿಲ್ಲ. ಹಾಗಾಗಿ ಸಚಿವ ಸಂಪುಟ ಸದ್ಯ ವಿಸ್ತರಣೆ ಆಗಲ್ಲ ಎಂದೇ ಹೇಳಲಾಗಿತ್ತು.  ಆದರೆ ಈಗ ಸಿಕ್ಕಿರುವ ಮಾಹಿತಿ ಸಂಪುಟ ವಿಸ್ತರಣೆ ಗುಟ್ಟನ್ನು ಬಿಟ್ಟು ಕೊಟ್ಟಿದೆ.

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬುದಕ್ಕೆ ಸಾಕ್ಷಿಯೊಂದು ಸಿಕ್ಕಿದೆ. ಸಚಿವರ ಪ್ರಮಾಣ ವಚನ ಕಾರ್ಯಕ್ರಮದ ಪೂರ್ವ ಭಾವಿ ಸಿದ್ದತೆಗಾಗಿ ಸಭೆ ಕರೆಯಲಾಗಿದೆ. 

ಮೊದಲ ಹಂತದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ?

ಬೆಂಗಳೂರಿನ ನೂತನ ಕಮಿಷನರ್ ಭಾಸ್ಕರ್ ರಾವ್ ನಗರ ಎಲ್ಲಾ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಶುಕ್ರವಾರ ಅಥವಾ ಶನಿವಾರ ಬಿಎಸ್ ವೈ ಸಂಪುಟದ ಮೊದಲ ಹಂತದ ಸಚಿವರು ಪ್ರಮಾಣ ತೆಗೆದುಕೊಳ್ಳಲ್ಲಿದ್ದಾರೆ ಎಂಬುದು ಖಾತ್ರಿಯಾಗಿದೆ. ಇನ್ನೊಂದು ಕಡೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ- ಯಡಿಯೂರಪ್ಪ ಮುಂದಿನ ಭೇಟಿ ಆ.12ಕ್ಕೆ ನಿಗದಿಯಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ