17 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ

Published : Aug 26, 2019, 08:19 PM ISTUpdated : Aug 26, 2019, 08:55 PM IST
17 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ

ಸಾರಾಂಶ

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ 25 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೊಂಡಿದ್ದು, ಇದಾದ ಐದು ದಿನಗಳ ಬಳಿಕ ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ವಿವರ ಈ ಕೆಳಗಿನಂತಿದೆ .  

ಬೆಂಗಳೂರು, ಆ.26: ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಒಟ್ಟು 17 ಹೊಸ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಬಿ.ಎಸ್‌.ಯಡಿಯೂರಪ್ಪ ಅವರು ಅಳೆದು ತೂಗಿ 17 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು, ಇದೀಗ ಖಾತೆ ಹಂಚಿಕೆಯಲ್ಲೂ ಸಹ ಸಚಿವರ ಸಾಮರ್ಥ ಅನುಗುಣವಾಗಿ ಖಾತೆ  ನೀಡಿದ್ದಾರೆ.  ಹಾಗಾದ್ರೆ ಯಾರಿಗೆ ಯಾವ ಖಾತೆ ಎನ್ನುವುದು ಈ ಕೆಳಗಿನಂತಿದೆ.

1. ಆರ್.ಅಶೋಕ್ – ಕಂದಾಯ ಖಾತೆ
2. ವಿ.ಸೋಮಣ್ಣ – ವಸತಿ
3. ಬಸವರಾಜ್‌ ಬೊಮ್ಮಾಯಿ – ಗೃಹ ಖಾತೆ
4. ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
5. ಜಗದೀಶ್ ಶೆಟ್ಟರ್ – ಬೃಹತ್ & ಮಧ್ಯಮ ಕೈಗಾರಿಕೆ
6. ಲಕ್ಷ್ಮಣ ಸವದಿ – ಸಾರಿಗೆ ಇಲಾಖೆ
7. ಗೋವಿಂದ ಕಾರಜೋಳ – ಲೋಕೋಪಯೋಗಿ, ಸಮಾಜ ಕಲ್ಯಾಣ 
8. ಡಾ. ಅಶ್ವತ್ಥ್‌ ನಾರಾಯಣ – ಉನ್ನತ ಶಿಕ್ಷಣ & ಐಟಿ-ಬಿಟಿ 
9. ಜೆ.ಸಿ. ಮಾಧುಸ್ವಾಮಿ – ಕಾನೂನು & ಸಂಸದೀಯ, ಸಣ್ಣ ನೀರಾವರಿ
10. ಬಿ. ಶ್ರೀರಾಮುಲು – ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ
11. ಸುರೇಶ್ ಕುಮಾರ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ 
12. ಪ್ರಭು ಚೌಹಾಣ್‌ – ಪಶು ಸಂಗೋಪನಾ ಖಾತೆ
13. ಹೆಚ್. ನಾಗೇಶ್ – ಅಬಕಾರಿ
14. ಸಿ.ಸಿ. ಪಾಟೀಲ್ – ಗಣಿ & ಭೂ ವಿಜ್ಞಾನ ಇಲಾಖೆ
15. ಸಿ.ಟಿ. ರವಿ – ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ
16. ಕೋಟ ಶ್ರೀನಿವಾಸ ಪೂಜಾರಿ – ಮುಜರಾಯಿ, ಮೀನುಗಾರಿಕೆ, ಬಂದರು
17. ಶಶಿಕಲಾ ಜೊಲ್ಲೆ- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಮೂವರಿಗೆ ಡಿಸಿಎಂ ಪಟ್ಟ
1. ಗೋವಿಂದ ಕಾರಜೋಳ
2. ಅಶ್ವಥ್​ ನಾರಾಯಣ
3. ಲಕ್ಷ್ಮಣ್​ ಸವದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಸರ್ಕೆ ಚುನರ್' ಹಾಡಿನ ವಿವಾದದ ಬೆನ್ನಲ್ಲೇ ಗಾಯಕಿ ಮಂಗ್ಲಿ ವಿರುದ್ಧ ಮತ್ತೊಂದು ಸುದ್ದಿ ಸ್ಪೋಟ; ಗಾಯಕಿ ಹೇಳಿದ್ದೇನು?
20 ಬಾರಿ ಬೇಯಿಸಿದರೂ ಬೇಯದ ತಲೆಮಾಂಸ: ಮಾಂಸದ ಪಾತ್ರೆಯೊಂದಿಗೆ ಠಾಣೆಗೆ ಬಂದವನಿಗೆ ನ್ಯಾಯ ನೀಡಿದ ಪೊಲೀಸರು