ಶೀಘ್ರವೇ ವಿಸ್ತರಣೆ ಆಗುತ್ತೆ ರಾಜ್ಯ ಮಂತ್ರಿ ಮಂಡಲ

Published : Aug 09, 2019, 03:43 PM IST
ಶೀಘ್ರವೇ ವಿಸ್ತರಣೆ ಆಗುತ್ತೆ ರಾಜ್ಯ ಮಂತ್ರಿ ಮಂಡಲ

ಸಾರಾಂಶ

ರಾಜ್ಯದ ಹಲವು ಜಿಲ್ಲೆಗಳು ಪ್ರವಾಹ ಪೀಡಿತವಾಗಿವೆ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಮಂತ್ರಿಗಳೇ ಇಲ್ಲದಂತಾಗಿದೆ. ಇದರ ನಡುವೆ ರಾಜ್ಯದ ಸ್ಥಿತಿ ಸುಧಾರಣೆಯ ಬಳಿಕವಷ್ಟೇ ಸಂಪುಟ ವಿಸ್ತರಣೆ ಎಂದು ಇನ್ನಷ್ಟು ದಿನಗಳ ಕಾಲ ಮುಂದೂಡುವ ಬಗ್ಗೆ ಬಿಜೆಪಿ ನಾಯಕಿ ಸೂಚನೆ ನೀಡಿದ್ದಾರೆ. 

ಉಡುಪಿ [ ಆ.09]: ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸುತ್ತಿವೆ. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಉಡುಪಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಸುಷ್ಮಾ ಸ್ವರಾಜ್ ನಿಧನದಿಂದ ಸದ್ಯ ಮುಂದೂಡಿಕೆಯಾಗಿದೆ. ಹೈ ಕಮಾಂಡ್ ಒಪ್ಪಿಗೆ ದೊರೆತ ತಕ್ಷಣ ಮಂತ್ರಿಮಂಡಲ ವಿಸ್ತರಣೆ ಮಾಡಲಾಗುತ್ತದೆ ಎಂದರು.

ರಾಜ್ಯದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದೆ.  ನೆರೆ ಪರಿಹಾರ ನಮ್ಮ ಮೊದಲ ಆದ್ಯತೆಯಾಗಿದೆ. ಸದ್ಯ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎನ್ನುವ ಲೆಕ್ಕ ಸಿಕ್ಕಿಲ್ಲ. ನಷ್ಟದ ಪ್ರಮಾಣದ ಬಗ್ಗೆ ಮಾಹಿತಿ ಕಲೆಹಾಕಿ ಕೇಂದ್ರಕ್ಕೆ ನೆರವಿಗಾಗಿ ಪತ್ರ ಬರೆಯಲಾಗುತ್ತದೆ ಎಂದರು. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇದೇ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಶೋಭಾ ಕರಂದ್ಲಾಜೆ, ಅಧಿಕಾರ ಕಳೆದುಕೊಂಡು ಅವರು ಅಸಹನೆಗೆ ಒಳಗಾಗಿದ್ದಾರೆ.  ಅಧಿಕಾರ ಇಲ್ಲದೇ ಬೇಸತ್ತು ಮಾತುಗಳನ್ನಾಡುತ್ತಿದ್ದಾರೆ. ಕುಮಾರಸ್ವಾಮಿ ಸಿಟ್ಟಿನಲ್ಲಿದ್ದಾರೆ. ಭ್ರಮನಿರಸನವಾದವರ ಬಗ್ಗೆ ನಾವು ಮಾತನಾಡಲ್ಲ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ