
ನವದೆಹಲಿ: ಕರ್ನಾಟಕ ರಾಜ್ಯವು ತನ್ನದೇ ಆದ ಸ್ವಂತ ಧ್ವಜವನ್ನು ಹೊಂದಬಹುದು, ಆ ನಿಟ್ಟಿನಲ್ಲಿ ಸಂವಿಧಾನದಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್’ನ ಹಿರಿಯ ನ್ಯಾಯವಾದಿ ಹಾಗೂ ಸಂವಿಧಾನ ತಜ್ಞ ಪವಾನಿ ಪರಮೇಶ್ವರ್ ರಾವ್ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರಧ್ವಜದೊಂದಿಗೆ ರಾಜ್ಯಗಳು ತಮ್ಮದೇ ಆದ ಧ್ಯಜವನ್ನು ಹೊಂದಲು ಸಂವಿಧಾನದಲ್ಲಿ ಯಾವುದೇ ನಿರ್ಬಂಧವಿಲ್ಲ. ರಾಜ್ಯಗಳು ತಮ್ಮ ದ್ವಜವನ್ನು ಹೊಂದಬಹುದು, ಅದರಲ್ಲಿ ಏನೂ ತಪ್ಪಿಲ್ಲ, ಎಂದು ರಾವ್ ಏಎನ್ಐ’ಗೆ ತಿಳಿಸಿದ್ದಾರೆ.
ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ ಹೊಂದುವ ಬಗ್ಗೆ ಕಾನೂನಾತ್ಮಕ ಅಂಶಗಳನ್ನು ಅವಲೋಕಿಸಲು ರಾಜ್ಯ ಸರಕಾರವು 9 ಮಂದಿಯ ಸಮಿತಿಯನ್ನು ರಚಿಸಿರುವುದು ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
(ಚಿತ್ರಕೃಪೆ: ಏಎನ್ಐ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.